- Advertisement -
- Advertisement -
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆಗಾಗಿ ಬಾಕಿ ಉಳಿಸಿಕೊಂಡಿದ್ದ ಎರಡು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟಗೊಳಿಸಿದೆ. ತೀವ್ರ ಕುತೂಹಲ ಕೆರಳಿಸಿದ್ದಂತ ಶಿವಮೊಗ್ಗ ಕ್ಷೇತ್ರಕ್ಕೆ ಚೆನ್ನ ಬಸಪ್ಪಗೆ ಟಿಕೆಟ್ ನೀಡಲಾಗಿದೆ.
ಈ ಮೂಲಕ ಪುತ್ರನಿಗೆ ಟಿಕೆಟ್ ನೀಡುವ ನಿರೀಕ್ಷೆಯಲ್ಲಿ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಕೆ.ಎಸ್ ಈಶ್ವರಪ್ಪ, ಟಿಕೆಟ್ ಗಾಗಿ ಬಂಡಾಯವೆದ್ದ ಆಯನೂರು ಮಂಜುನಾಥ್ ಗೆ ಬಿಗ್ ಶಾಕ್ ನೀಡಿದೆ.
ಇನ್ನೂ ಮಾನ್ವಿ ಎಸ್ಟಿ ಮೀಸಲು ಕ್ಷೇತ್ರಕ್ಕೆ ಬಿ.ವಿ ನಾಯ್ಕ್ ಗೆ ಟಿಕೆಟ್ ನೀಡಲಾಗಿದೆ. ಅದರಂತೆ ಒಟ್ಟಾರೆ ಬಿಜೆಪಿಯಿಂದ 224 ಕ್ಷೇತ್ರಗಳಿಗೆ ಅಂತಿಮ ಪಟ್ಟಿ ಬಿಡುಗಡೆ ಮಾಡಿದೆ.
- Advertisement -