- Advertisement -
- Advertisement -
ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಪ್ರವೀಣ್ ನೆಟ್ಟಾರು ಪತ್ನಿ ಕೆಲಸದಿಂದ ವಜಾಗೊಂಡಿರುವ ಬಗ್ಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಕಾಂಗ್ರೆಸ್ ಬಿಜೆಪಿ ವಿರುದ್ಧ ಪ್ರತ್ಯಾರೋಪ ಮಾಡಿದೆ.
ಭ್ರಷ್ಟಾಚಾರವೇ ಕುಲದೈವ ಎಂದು ನಂಬಿರುವ ಬಿಜೆಪಿಗೆ ನೀತಿ ನಿಯಮಗಳನ್ನು ಅಧ್ಯಯನ ಮಾಡಲು ಆಸಕ್ತಿ & ಸಮಯ ಇರಲು ಸಾಧ್ಯವೇ? ನಿಯಮದ ಪ್ರಕಾರ ಸರ್ಕಾರ ಬದಲಾದಾಗ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದಾಗುತ್ತವೆ, ಬದುಕಿಗೆ ಶಾಶ್ವತ ದಾರಿ ತೋರಿಸದೆ ಇಂತಹ ಪೇಪರ್ ಚಾಕ್ಲೆಟ್ ನೀಡುವ ಮೂಲಕ ಬಿಜೆಪಿ ಪ್ರವೀಣ್ ಪತ್ನಿಗೆ ದ್ರೋಹವೆಸಗಿದೆ ಎಂದು ಕಾಂಗ್ರೆಸ್ ಟ್ವಿಟ್ಟರ್ ಮೂಲಕ ತಿರುಗೇಟು ನೀಡಿದೆ.
- Advertisement -