Friday, May 17, 2024
Homeತಾಜಾ ಸುದ್ದಿಜಮೀರ್ ಅವರಿಗೆ ನೋಟಿಸ್ ನೀಡಿದರೆ ಸಿದ್ದರಾಮಯ್ಯ ಬಣದಿಂದ ಆಕ್ರೋಶ ವ್ಯಕ್ತವಾಗುವ ಭಯ ಡಿಕೆಶಿ ಅವರನ್ನು ಕಾಡುತ್ತಿದೆಯೇ?...

ಜಮೀರ್ ಅವರಿಗೆ ನೋಟಿಸ್ ನೀಡಿದರೆ ಸಿದ್ದರಾಮಯ್ಯ ಬಣದಿಂದ ಆಕ್ರೋಶ ವ್ಯಕ್ತವಾಗುವ ಭಯ ಡಿಕೆಶಿ ಅವರನ್ನು ಕಾಡುತ್ತಿದೆಯೇ? ಬಿಜೆಪಿ ಟ್ವೀಟ್

spot_img
- Advertisement -
- Advertisement -

ಬೆಂಗಳೂರು: ಮಾನ್ಯ ಡಿ ಕೆ ಶಿವಕುಮಾರ್ ಅವರೇ, ನಿಮ್ಮ ಸದಾರಮೆ ನಾಟಕವನ್ನು ನಿಲ್ಲಿಸಿ. ಹಿಜಾಬ್‌ಗೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುತ್ತಲೇ ಕಾನೂನು ಹೋರಾಟಕ್ಕೆ ನೇರವಾಗಿ ಸಹಕರಿಸಿದಿರಿ. ಹರ್ಷ ಕೊಲೆಯಾದಾಗ ಅಂತರ ಕಾಯ್ದುಕೊಂಡ ನೀವು ಈಗ ಹುಬ್ಬಳ್ಳಿ ಗಲಭೆಕೋರರಿಗೆ ಆರ್ಥಿಕ ಸಹಾಯ ನೀಡಲು ಹೊರಟಿದ್ದೀರಿ. ಏನಿದೆಲ್ಲ? ಎಂದು ಬಿಜೆಪಿ ಪ್ರಶ್ನಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ, ಕೆಪಿಸಿಸಿ ಭ್ರಷ್ಟಾಧ್ಯಕ್ಷ ಡಿಕೆಶಿ ಅವರೇ, ಅವರಿಗೂ ನಮಗೂ ಸಂಬಂಧವಿಲ್ಲ ಎಂಬ ಸೋಗಲಾಡಿತನ ಬಿಡಿ. ಫುಡ್ ಕಿಟ್ ಹಂಚಲು ತಯಾರಾಗಿದ್ದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೂ ನಿಮ್ಮ ಪಕ್ಷಕ್ಕೂ ಸಂಬಂಧ ಇದೆಯೋ, ಇಲ್ಲವೋ ಎಂಬುದನ್ನು ಮೊದಲು ಸ್ಪಷ್ಟಪಡಿಸಿ. ಈ ರೀತಿ ತಿಪ್ಪೆಸಾರಿಸುವ ಬದಲು ಸತ್ಯ ಒಪ್ಪಿಕೊಳ್ಳಿ ಎಂದಿದೆ.

ಹುಬ್ಬಳ್ಳಿ ಗಲಭೆಯ ಆರೋಪಿಗಳಿಗೆ ಆರ್ಥಿಕ ಮತ್ತು ಆಹಾರ ಕಿಟ್ ಒದಗಿಸಲು ಹೊರಟ ಕಾಂಗ್ರೆಸ್‌ ಶಾಸಕರೊಬ್ಬರನ್ನು ಪ್ರಶ್ನಿಸುವಷ್ಟೂ ಸಾಮರ್ಥ್ಯ ಕೆಪಿಸಿಸಿ ಅಧ್ಯಕ್ಷರಿಗೆ ಇಲ್ಲವೇ? ಜಮೀರ್ ಅವರಿಗೆ ನೋಟಿಸ್ ನೀಡಿದರೆ ಸಿದ್ದರಾಮಯ್ಯ ಬಣದಿಂದ ಆಕ್ರೋಶ ವ್ಯಕ್ತವಾಗುವ ಭಯ ಡಿಕೆಶಿ ಅವರನ್ನು ಕಾಡುತ್ತಿದೆಯೇ? ಎಂದು ಪ್ರಶ್ನಿಸಿದೆ.

ಇನ್ನು ಅಧಿಕಾರದಲ್ಲಿದ್ದಾಗ ಸಮಾಜ ಘಾತುಕ ಪಿಎಫ್‌ಐ, ಎಸ್‌ಡಿಪಿಐ ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನು ಖುಲಾಸೆ ಮಾಡಿದಿರಿ. ಕಾಂಗ್ರೆಸ್‌ ಪಕ್ಷದ ಕೃಪಾಶೀರ್ವಾದದಿಂದ ಬೆಳೆದ ಅದೇ ಮತಾಂಧರು ಸಮಾಜ ಘಾತುಕ ಚಟುವಟಿಕೆಗಳಲ್ಲಿ ಈಗ ತೊಡಗಿಸಿಕೊಂಡಿದ್ದಾರೆ. ನೀವೇ ಬೆಳೆಸಿದ ಸಂಘಟನೆಗಳನ್ನು ಈಗ ನಿಷೇಧಿಸಿ ಎನ್ನುವುದಕ್ಕೆ ಅರ್ಥವಿದೆಯೇ? ಎಂದು ವಾಗ್ದಾಳಿ ನಡೆಸಿದೆ.

- Advertisement -
spot_img

Latest News

error: Content is protected !!