Saturday, June 28, 2025
Homeಅಪರಾಧಬಿಜೆಪಿ ನಾಯಕ ಮತ್ತು ಮಹಿಳೆಯ ಲೈಂಗಿಕ ದೌರ್ಜನ್ಯ ಪ್ರಕರಣ; ಪುತ್ತಿಲ ವಿರುದ್ಧ ಅತ್ಯಾಚಾರ ಆರೋಪ ಸೇರ್ಪಡೆ; ನ್ಯಾಯಾಲಯಕ್ಕೆ ವರದಿ...

ಬಿಜೆಪಿ ನಾಯಕ ಮತ್ತು ಮಹಿಳೆಯ ಲೈಂಗಿಕ ದೌರ್ಜನ್ಯ ಪ್ರಕರಣ; ಪುತ್ತಿಲ ವಿರುದ್ಧ ಅತ್ಯಾಚಾರ ಆರೋಪ ಸೇರ್ಪಡೆ; ನ್ಯಾಯಾಲಯಕ್ಕೆ ವರದಿ ನೀಡಿದ ಪೊಲೀಸರು

spot_img
- Advertisement -
- Advertisement -

ಪುತ್ತೂರು: ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಮಹಿಳೆಯೋರ್ವರ ಮೇಲಿನ ಲೈಂಗಿಕ ದೌರ್ಜನ್ಯ ಕೊಲೆ ಬೆದರಿಕೆಯೊಡ್ಡಿರುವ ಆರೋಪದಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಜಾಮೀನು ಪಡೆದುಕೊಂಡಿರುವ ಅವರ ವಿರುದ್ಧ ಇದೀಗ ಸಂತ್ರಸ್ತ ಮಹಿಳೆ ಅತ್ಯಾಚಾರ ಆರೋಪವನ್ನೂ ಸೇರಿಸಿದ್ದಾರೆ.

ಈ ಬೆಳವಣಿಗೆಯಾಗಿಯು ಸಂತ್ರಸ್ತ ಮಹಿಳೆ ನ್ಯಾಯಾಧೀಶರೆದುರು 164ರಡಿ ಹೇಳಿಕೆ ನೀಡಿದ ಬಳಿಕವಾಗಿದ್ದು, ಅತ್ಯಾಚಾರ ಆರೋಪವನ್ನೂ ಪ್ರಕರಣದಲ್ಲಿ ಸೇರಿಸಲಾಗಿದೆ. ಈ ಪ್ರಕರಣವು ಬೆಂಗಳೂರಿನಲ್ಲಿ ನಡೆದಿರುವುದರಿಂದಾಗಿ ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಪೊಲೀಸರು ಪುತ್ತೂರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಸೆ.2ರಂದು ಸಂತ್ರಸ್ತೆಯನ್ನು ಪೊಲೀಸರು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿತ್ತು. ನಂತರದಲ್ಲಿ ಆಕೆ ಪುತ್ತೂರು ನ್ಯಾಯಾಲಯದಲ್ಲಿ ನ್ಯಾಯಾಧೀಶರೆದುರು ಅತ್ಯಾಚಾರದ ಕುರಿತು ಹೇಳಿಕೆ ನೀಡಿದ್ದರು. ಸಂತ್ರಸ್ತೆ ಸುಮಾರು 1 ಗಂಟೆಗಿಂತ ಹೆಚ್ಚು ಹೊತ್ತು  ನ್ಯಾಯಾಧೀಶರೆದುರು ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಆಕೆ ಹೇಳಿಕೆ ನೀಡಿದ ಬಳಿಕ ಸಂತ್ರಸ್ತೆಯನ್ನು ಪೊಲೀಸರು ಬೆಂಗಳೂರಿಗೆ ಕರೆದೊಯ್ದು ಪೈ ವಿಸ್ಟಾ ಹೊಟೇಲ್‌ನಲ್ಲಿ ಸ್ಥಳ ಮಹಜರು ನಡೆಸಿದ್ದರು ಎಂದು ತಿಳಿದು ಬಂದಿದೆ.

ಸಂತ್ರಸ್ತೆಯ ದೂರು: ಪುತ್ತಿಲ ಅವರ ಹಿಂದುತ್ವದ ಪ್ರತಿಪಾದನೆ ಮತ್ತು ಪ್ರಖ್ಯಾತಿಯನ್ನು ಕಂಡು ತಾನು ಅಭಿಮಾನವನ್ನು ಹೊಂದಿದ್ದು, ಅವರಿಗೆ ಸಾಮಾಜಿಕ ಜಾಲತಾಣಗಳ ಮೂಲಕ ನೈತಿಕ ಬೆಂಬಲ ನೀಡುತ್ತಿದ್ದೆ. ನನ್ನನ್ನು ಅವರು ಬೆಂಗಳೂರು ಪೈ ವಿಸ್ಟಾ ಹೊಟೇಲ್‌ಗೆ ಜೂನ್ 2023ಕ್ಕೆ ಕರೆಸಿಕೊಂಡು, ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಬೆದರಿಸಿ, ತನ್ನ ಇಚ್ಚೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದರು.ಇತರ ಕಡೆಗಳಲ್ಲಿ ಮುಖತ: ಸಂಪರ್ಕಿಸುತ್ತಿದ್ದು ಎಲ್ಲಾ ಸಂದರ್ಭಗಳಲ್ಲೂ ಕೂಡಾ, ಒಂದೋ ನಿನ್ನ ಪ್ರಾಣ ಹೋಗುತ್ತದೆ.

ಇಲ್ಲಾ ನನ್ನ ಪ್ರಾಣ ಹೋಗುತ್ತದೆ ಎಂದು ಬ್ಲ್ಯಾಕ್‌ಮೇಲ್ ಮಾಡಿ ನನ್ನನ್ನು ಅವರು ಇರುವ ಜಾಗಕ್ಕೆ ಕರೆಸಿಕೊಳ್ಳುತ್ತಿದ್ದರು.ಅಬಲೆಯಾದ ನನ್ನನ್ನು ಮತ್ತು ನನ್ನ ಮಗಳನ್ನು ಜೀವನಪೂರ್ತಿ ಯಾವುದೇ ಕುಂದುಕೊರತೆಗಳಿಲ್ಲದೆ ನೋಡಿಕೊಳ್ಳುತ್ತೆನೆಂದು ಹೇಳಿ ನನ್ನನ್ನು ನಂಬಿಸಿ ದೈಹಿಕವಾಗಿ ಹಾಗೂ ಮಾನಸಿಕವಾಗಿ ಬಳಸಿಕೊಳ್ಳುತ್ತಿದ್ದರು.

ನಾನು ಆತನೊಂದಿಗಿದ್ದ ಕ್ಷಣಗಳ ಛಾಯಾಚಿತ್ರಗಳು,ಸೆಲ್ಫಿಗಳು,ಆಡಿಯೋ-ವೀಡಿಯೋಗಳು ಅರುಣ್ ಕುಮಾರ್ ಪುತ್ತಿಲ ತನ್ನಲ್ಲಿದೆಯೆಂದು ಹೇಳಿ ನನ್ನನ್ನು ಬೆದರಿಸಿ,ಬ್ಲ್ಯಾಕ್‌ಮೇಲ್ ಮಾಡಿ ಕೆಲಸಗಳನ್ನು ಮಾಡಿಕೊಳ್ಳುತ್ತಿದ್ದು 2024ರ ಲೋಕಸಭೆ ಚುನಾವಣೆಯ ನಂತರ ತನ್ನೊಂದಿಗಿನ ಮಾತುಕತೆಯನ್ನು ಕಡಿಮೆಗೊಳಿಸಿ, ನನ್ನನ್ನು ಸಂಪೂರ್ಣವಾಗಿ ಶೋಷಣೆಗೊಳಪಡಿಸಿರುವುದಾಗಿೞಆರೋಪಿಸಿ ಸಂತ್ರಸ್ತ ಮಹಿಳೆ ಸೆ.೧ರಂದು ನೀಡಿದ್ದ ದೂರಿನ ಮೇರೆಗೆ ಅರುಣ್ ಕುಮಾರ್ ಪುತ್ತಿಲ ಅವರ ವಿರುದ್ಧ ಮಹಿಳಾ ಠಾಣೆ ಪೊಲೀಸರು ಐಪಿಸಿ ಸೆಕ್ಷನ್ 417,354(ಎ),506ರಡಿ ಪ್ರಕರಣ(ಅ.ಕ್ರ..0045/2024)ದಾಖಲಿಸಿಕೊಂಡಿದ್ದರು.

ಬೆಂಗಳೂರಿಗೆ ಪ್ರಕರಣವನ್ನು ವರ್ಗಾಯಿಸುವಂತೆ ಅರ್ಜಿ: ಬೆಂಗಳೂರಿನ ಪೈ ವಿಸ್ಟಾ ಹೊಟೇಲ್‌ನಲ್ಲಿ 2023ರ ಜೂ.1ರಿಂದ 8ರ ನಡುವಿನ ಅವಧಿಯಲ್ಲಿ ಕೃತ್ಯ ನಡೆದಿರುವುದಾಗಿ ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ. ಬೆಂಗಳೂರು ವ್ಯಾಪ್ತಿಯಲ್ಲಿ ಈ ಕೃತ್ಯ ನಡೆದಿರುವುದರಿಂದ ಈ ಪ್ರಕರಣವನ್ನು ಪುತ್ತೂರು ನ್ಯಾಯಾಲಯದಿಂದ ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯದ ಸುಪರ್ದಿಗೆ ವರ್ಗಾಯಿಸುವಂತೆಯೂ ಪೊಲೀಸರು ಪುತ್ತೂರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಇನ್ನು ನ್ಯಾಯಾಲಯವು ಈ ಅರ್ಜಿಯನ್ನು ಪರಿಗಣಿಸಿ ಪ್ರಕರಣವನ್ನು ಬೆಂಗಳೂರು ನ್ಯಾಯಾಲಯಕ್ಕೆ ವರ್ಗಾಯಿಸಿದರೆ ಮುಂದಿನ ವಿಚಾರಣೆ ಬೆಂಗಳೂರುನಲ್ಲಿಯೇ ನಡೆಯಲಿದೆ ಎಂದು ತಿಳಿದು ಬಂದಿದೆ.

ಅರುಣ್ ಕುಮಾರ್ ವಿರುದ್ಧ ಅತ್ಯಾಚಾರ ಆರೋಪ ಸೇರ್ಪಡೆ: ಅರುಣ್ ಕುಮಾರ್ ಪುತ್ತಿಲ ಅವರ ವಿರುದ್ಧ ಸಂತ್ರಸ್ತೆ ನ್ಯಾಯಾಧೀಶರೆದುರು ಅತ್ಯಾಚಾರ(ಐಪಿಸಿ ಸೆಕ್ಷನ್ 376)ಆರೋಪ ಹೇಳಿಕೆ ನೀಡಿದ ಬಳಿಕ ಪೊಲೀಸರು ಇದೀಗ ಪ್ರಕರಣದಲ್ಲಿ ಸೇರ್ಪಡೆಗೊಳಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

- Advertisement -
spot_img

Latest News

error: Content is protected !!