Sunday, May 19, 2024
Homeಕರಾವಳಿಸುಳ್ಯ; ವಿವಾಹಿತೆಯೊಂದಿಗೆ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದ ಬಿಜೆಪಿ ಮುಖಂಡ; ಮಹಿಳೆ ಪತಿಯಿಂದ ಸಿಕ್ತು ಧರ್ಮದೇಟು

ಸುಳ್ಯ; ವಿವಾಹಿತೆಯೊಂದಿಗೆ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದ ಬಿಜೆಪಿ ಮುಖಂಡ; ಮಹಿಳೆ ಪತಿಯಿಂದ ಸಿಕ್ತು ಧರ್ಮದೇಟು

spot_img
- Advertisement -
- Advertisement -

ಸುಳ್ಯ: ಬಿಜೆಪಿ ಮುಖಂಡನೊಬ್ಬ ವಿವಾಹಿತೆಯೊಂದಿಗೆ ಸಿಕ್ಕಿ ಬಿದ್ದು ಆಕೆಯ ಪತಿಯಿಂದ ಧರ್ಮದೇಟು ತಿಂದ ಘಟನೆ ಸುಳ್ಯ ತಾಲೂಕಿನ ಜಾಲ್ಸೂರಿನಲ್ಲಿ ನಡೆದಿದೆ.

ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷ ಹಾಗೂ ಪುಣಚ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾದ ಹರಿಪ್ರಸಾದ್‌ ಯಾದವ್‌‌ ಎಂಬವರು ಮಹಿಳೆಯೊಬ್ಬರ ಜೊತೆ ಅನೈತಿಕ ಸಂಬಂಧ ಹೊಂದಿದ್ದರು ಎಂದು ಆರೋಪಿಸಲಾಗಿದೆ. ಮೊನ್ನೆ ಅದೇ ಮಹಿಳೆ ಜೊತೆ ಹರಿಪ್ರಸಾದ್ ಯಾದವ್ ತೆರಳುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಮಹಿಳೆಯ ಪತಿ ಅವರನ್ನು ಹಿಂಬಾಲಿಸಿ ಸುಳ್ಯದ ಜಾಲ್ಸೂರು ಬಳಿ ಹಿಡಿದಿದ್ದಾರೆ. ಅಲ್ಲದೇ ಧರ್ಮದೇಟು ನೀಡಿದ್ದಾರೆ. ಈ ವೇಳೆ ಹರಿಪ್ರಸಾದ್ ಕಾರು ಹಾಗೂ ಮಹಿಳೆಯನ್ನು ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ.

.

ಈ ಕುರಿತು ಮಹಿಳೆಯ ಪತಿ ಬಿಜೆಪಿ ಮುಖಂಡ ಹರಿಪ್ರಸಾದ್‌ ಯಾದವ್‌‌ ವಿರುದ್ಧ ಪುತ್ತೂರು ಡಿವೈಎಸ್ಪಿಯವರಿಗೆ ದೂರು ನೀಡಿದ್ದು, ತನ್ನ ಪತ್ನಿಯ ಜೊತೆ ಅನೈತಿಕ ಸಂಬಂಧ ಹೊಂದಿರುವುದಾಗಿ ಎಂದು ಆರೋಪಿಸಿದ್ದಾರೆ.

ತನ್ನ ಪತ್ನಿಯನ್ನು ಹರಿ ಪ್ರಸಾದ್‌ ಅನೈತಿಕ ಸಂಬಂಧ ನಡೆಸುವ ದುರುದ್ದೇಶದಿಂದ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾನೆ. ಈ ಬಗ್ಗೆ ಮಾಹಿತಿ ಪಡೆದು ಆ ಕಾರನ್ನು ನನ್ನ ಮೋಟಾರ್‌ ಬೈಕ್‌ ಮೂಲಕ ಪುತ್ತೂರಿನಿಂದ ಹಿಂಬಾಲಿಸಿದ್ದೇನೆ. ಸುಳ್ಯ ತಾಲೂಕಿನ ಜಾಲ್ಸೂರು ಎಂಬಲ್ಲಿ ಕಾರನ್ನು ತಡೆಯಲು ಪ್ರಯತ್ನಿಸಿದಾಗ ಹರಿ ಪ್ರಸಾದ್‌ ಬೈಕ್‌ ಮೇಲೆ ವಾಹನ ಚಲಾಯಿಸಿ ಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣ ತಪ್ಪಿಸಿಕೊಂಡ ನಾನು ಕಾರನ್ನು ತಡೆದಿದ್ದೇನೆ. ಘಟನಾ ಸ್ಥಳದಲ್ಲಿ ಜನರು ಜಮಾಯಿಸುತ್ತಿದ್ದಂತೆಯೇ ಹರಿ ಪ್ರಸಾದ್‌ ಕಾರು ಹಾಗೂ ಪತ್ನಿಯನ್ನು ಬಿಟ್ಟು ಪರಾರಿಯಾಗಿದ್ದಾನೆ ದೂರಿನಲ್ಲಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!