- Advertisement -
- Advertisement -
ಉಡುಪಿಯ ಬ್ರಹ್ಮಗಿರಿ ಸರ್ಕಲ್ನಲ್ಲಿ ಸಾವರ್ಕರ್ ಕಟೌಟ್ ವಿವಾದ ತಾರಕಕ್ಕೇರಿದ್ದು, ಕಟೌಟ್ ತೆರವುಗೊಳಿಸುವಂತೆ ಪೊಲೀಸರಿಗೆ ಕಾಂಗ್ರೆಸ್ ಮನವಿ ಸಲ್ಲಿಸಿದೆ. ಈ ಮಧ್ಯೆ ಬಿಜೆಪಿ ಮುಖಂಡ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಇಂದು ಬೆಳಗ್ಗೆ ಸಾವರ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು.
ಈ ಸಂದರ್ಭ ಮಾತನಾಡಿದ ಯಶ್ ಪಾಲ್ ಸುವರ್ಣ, ಸಾರ್ವಕರ್ ಮತ್ತು ನೇತಾಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ್ದೇವೆ. ಮುಂದೆ ಸಾರ್ವಕರ್ ಅವರ ಪುತ್ಥಳಿ ನಿರ್ಮಿಸಿ ದಿಟ್ಟ ಉತ್ತರ ಕೊಡುತ್ತೇವೆ ಎಂದಿದ್ದಾರೆ..
ಈ ವೇಳೆ ಬಿಜೆಪಿ ಹಾಗೂ ಸಂಘ ಪರಿವಾರದ ವಿವಿಧ ಮುಖಂಡರುಗಳು ಹಾಜರಿದ್ದರು. ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.
- Advertisement -