Sunday, May 12, 2024
Homeಕರಾವಳಿಬೂತ್ ಸಮಿತಿ ಅಧ್ಯಕ್ಷ ಯೋಗೀಶ್ ಕೆ ಅವರ ಮನೆಯಲ್ಲಿ ನಾಮಫಲಕ ಅಳವಡಿಕೆ ಕಾರ್ಯಕ್ರಮ!

ಬೂತ್ ಸಮಿತಿ ಅಧ್ಯಕ್ಷ ಯೋಗೀಶ್ ಕೆ ಅವರ ಮನೆಯಲ್ಲಿ ನಾಮಫಲಕ ಅಳವಡಿಕೆ ಕಾರ್ಯಕ್ರಮ!

spot_img
- Advertisement -
- Advertisement -

ಬಂಟ್ವಾಳ: ಬಿಜೆಪಿ ರಾಜ್ಯಾಧ್ಯಕ್ಷರ ಕನಸಿನ ಯೋಜನೆಯಾದ ಬೂತ್ ಅಧ್ಯಕ್ಷರ ಮನೆಯಲ್ಲಿ ನಾಮಫಲಕ ಅಳವಡಿಕೆ ಕಾರ್ಯಕ್ರಮ ಇಂದು ಬೆಳಿಗ್ಗೆ ಕಳ್ಳಿಗೆ ಗ್ರಾಮದ ಬ್ರಹ್ಮರಕೂಟ್ಲು ಬೂತ್ ಸಮಿತಿ ಅಧ್ಯಕ್ಷ ಯೋಗೀಶ್ ದರಿಬಾಗಿಲು ಅವರ ಮನೆಯಲ್ಲಿ ನೆರವೇರಿತು.

ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವರಾದಂತಹ ನಾರಾಯಣ ಸ್ವಾಮಿ ಅವರು ಮಾತನಾಡಿ, ಬಂಟ್ವಾಳದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇಂದು ಬೂತ್ ಸಮಿತಿ ಅಧ್ಯಕ್ಷರ ಮನೆಯಲ್ಲಿ ನಾಮಫಲಕ ಅಳವಡಿಕೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನ್ನ ಸೌಭಾಗ್ಯ ಎಂದು ಸಂತಸ ವ್ಯಕ್ತಪಡಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಬೂತ್ ಬೂತ್ ಗಳಲ್ಲಿ ಬಿಜೆಪಿ ಬಲವರ್ಧನೆಯಾಗಬೇಕು. ಇದಕ್ಕೆ ಶಕ್ತಿತುಂಬುವ ದೃಷ್ಟಿಯಿಂದ ಈ ಕನಸಿನ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಮೂಲಕ ಕಾಂಗ್ರೆಸ್ ಮುಕ್ತ ಬೂತ್ ನಿರ್ಮಾಣ ಸಾಧ್ಯ. ಪ್ರತಿ ಬೂತ್ ಗಳಲ್ಲಿ ಇಂತಹ ಯೋಜನೆಗಳನ್ನು ಯಶಸ್ವಿಯಾಗಿ ನಡೆಸುವುದು ನಮ್ಮ ಕರ್ತವ್ಯ ಎಂದು ನುಡಿದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಪುತ್ತೂರು ಶಾಸಕ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದರೆ, ಬಂಟ್ವಾಳ ಮಂಡಲ ಅಧ್ಯಕ್ಷ ದೇವಪ್ಪ ಪೂಜಾರಿ ಬಾಳಿಕೆ, ಮಂಡಲ ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ಜಗದೀಶ್ ಅಧಿಕಾರಿ, ರಮಾನಾಥ ರಾಯಿ, ಸೀತಾರಾಮ್ ಪೂಜಾರಿ ಅಮ್ಟಾಡಿ, ಸುದರ್ಶನ್ ಬಜ, ಪ್ರಕಾಶ್ ಅಂಚನ್, ರೊನಾಲ್ಡ್ ಡಿಸೋಜ, ಪುರುಷೋತ್ತಮ ಶೆಟ್ಟಿ ವಾಮದಪದವು, ಪುರುಷೋತ್ತಮ ಸಾಲಿಯಾನ್ ನರಿಕೊಂಬು, ಯಶೋಧರ ಕರ್ಬೆಟ್ಟು, ಹಿರಿಯ ಕಾರ್ಯಕರ್ತರಾದ ಭೋಜ ಪೂಜಾರಿ ದರಿಬಾಗಿಲು, ಭೂ ಅಭಿವೃದ್ಧಿ ಬ್ಯಾಂಕ್ ನಿರ್ದೇಶಕ ಅರುಣ್ ರೋಶನ್ ಡಿಸೋಜ, ಪಂಚಾಯತ್ ಅಧ್ಯಕ್ಷೆ ಯಶೋಧ ಜಾರಂದಗುಡ್ಡೆ, ಸದಸ್ಯರಾದ ಪುರುಷೋತ್ತಮ ಕೊಟ್ಟಾರಿ ಮಾಡಂಗೆ, ಮನೋಜ್ ವಳವೂರು, ವಾರಿಜ ಚಂದ್ರಿಗೆ, ರೇಶ್ಮಾ ಬೆಂಜನಪದವು, ಪಂಚಾಯತ್ ಮಾಜಿ ಸದಸ್ಯೆ ರೇವತಿ ಮಾಡಂಗೆ, ಬಿಜೆಪಿ ಮಂಡಲ ಕಾರ್ಯಕಾರಿಣಿ ಸದಸ್ಯ ದೇವಿಪ್ರಸಾದ್ ಎಂ, ಮಂಡಲ ಕಾನೂನು ಪ್ರಕೋಷ್ಟ ಸದಸ್ಯ ಪ್ರಶಾಂತ್ ನೆತ್ತರಕೆರೆ, ಹಿಂದುಳಿದ ವರ್ಗ ಮೋರ್ಚಾ ಸದಸ್ಯ ಲಕ್ಷ್ಮಣ ಕಂಜತ್ತೂರು, ಜಾರಂದಗುಡ್ಡೆ ಬೂತ್ ಅಧ್ಯಕ್ಷ ಶಿವರಾಜ್ ಜಾರಂದಗುಡ್ಡೆ, ಪಚ್ಚಿನಡ್ಕ ಬೂತ್ ಅಧ್ಯಕ್ಷ ಗ್ಲೆನ್ಸನ್ ಡಿಸೋಜಾ ಮತ್ತು ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!