ನಿಡ್ಲೆ: ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿಯ ನಿಡ್ಲೆ ಶಕ್ತಿಕೇಂದ್ರದಲ್ಲಿ ಚುನಾವಣಾ ಪೂರ್ವ ತಯಾರಿ ಸಭೆಯು ಬಿಜೆಪಿ ಪಕ್ಷದ ಕಾರ್ಯಕರ್ತರಾದ ಬರೆಂಗಾಯ ನಾಗೇಶ್ ಗೌಡ ಅತ್ಯರಂಡ ಇವರ ಮನೆಯಲ್ಲಿ ಇಂದು ನಡೆಯಿತು.
ಈ ಸಭೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಹರೀಶ್ ಪೂಂಜಾ, ಮಂಡಲದ ಅಧ್ಯಕ್ಷರಾದ ಜಯಂತ್ ಕೋಟ್ಯಾನ್ ಮಂಡಲದ ಪದಾಧಿಕಾರಿಗಳು . ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಪದಾಧಿಕಾರಿಗಳು, ಶಕ್ತಿಕೇಂದ್ರ ಪ್ರಮುಖರು, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರು, ನಿಡ್ಲೆ ಮೂರು ಬೂತಿನ ಅಧ್ಯಕ್ಷ ರು, ಕಾರ್ಯದರ್ಶಿಗಳು, ಪಂಚಾಯತ್ ಅಧ್ಯಕ್ಷರು,ಉಪಾಧ್ಯಕ್ಷರು, ಸರ್ವಸದಸ್ಯರು. ಸಿ.ಎ ಬ್ಯಾಂಕಿನ ಉಪಾದ್ಯಕ್ಷರು, ನಿರ್ದೇಶಕರು. ಬರೆಂಗಾಯ ಹಾಲು ಒಕ್ಕೂಟದ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರುಗಳು, ಮೋರ್ಚಾಗಳ ಪದಾಧಿಕಾರಿಗಳು, ಪ್ರಕೋಷ್ಟದ ಪದಾಧಿಕಾರಿಗಳು, ಮಹಿಳಾ ಮೋರ್ಚಾ ಪದಾಧಿಕಾರಿಗಳು, ವಿವಿಧ ಸಂಘಟನೆಯ ಪ್ರಮುಖರು. ಪಕ್ಷದ ಪ್ರಮುಖ ಹಿರಿಯ ಕಿರಿಯ ಕಾರ್ಯಕರ್ತ ಬಂಧುಗಳು ಹಾಗೂ ಮಾತೆಯರು ಈ ಸಭೆಯಲ್ಲಿ ಉಪಸ್ಥಿತರಿದ್ದರು .