Friday, June 27, 2025
HomeUncategorizedಬೆಳ್ತಂಗಡಿ: ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಎಂಎಲ್ಸಿ ಐವನ್ ಡಿ ಸೋಜ ವಿರುದ್ಧ ಕೇಸ್...

ಬೆಳ್ತಂಗಡಿ: ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಎಂಎಲ್ಸಿ ಐವನ್ ಡಿ ಸೋಜ ವಿರುದ್ಧ ಕೇಸ್ ದಾಖಲಿಸಲು ಶಾಸಕ ಪೂಂಜ ಒತ್ತಾಯ

spot_img
- Advertisement -
- Advertisement -

ಬೆಳ್ತಂಗಡಿ: ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಎಂಎಲ್ಸಿ ಐವನ್ ಡಿ ಸೋಜ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಶಾಸಕ  ಹರೀಶ್ ಪೂಂಜ ಒತ್ತಾಯಿಸಿದ್ದಾರೆ.

ಇಂದು ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಮತ್ತು ರಾಜ್ಯಪಾಲರ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಐವನ್ ಡಿ’ಸೋಜ ರವರ ವಿರುದ್ಧ  ದೂರು ದಾಖಲಿಸಲು ಒತ್ತಾಯಿಸಿ ಆ. 28ರಂದು ಬೆಳ್ತಂಗಡಿಯ ಮೂರು ಮಾರ್ಗದ ಬಳಿ ರಸ್ತೆ ತಡೆ ಮೂಲಕ ಪ್ರತಿಭಟನೆ ನಡೆಯಿತು. ಈ ವೇಳೆ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ನಂತರ ಭ್ರಷ್ಟಾಚಾರವನ್ನು ಯಾವ ರೀತಿಯಲ್ಲಿ ಮಾಡಬಹುದು ಎನ್ನುವಂತಹ ಮಾದರಿಯಾಗಿ ದೇಶಕ್ಕೆ ತೋರಿಸಿಕೊಟ್ಟಿದೆ.

ಸಂವಿಧಾನ ವಿರೋಧಿ ಕೆಲಸವನ್ನು ನೆಪದಲ್ಲಿ ಕಾಂಗ್ರೆಸ್‌ ಜಿಲ್ಲಾವಾರು ಪ್ರತಿಭಟನೆಗಳು ಮಾಡಿತ್ತು. ಆ ಸಂದರ್ಭದಲ್ಲಿ ಈ ಜಿಲ್ಲೆಯ ವಿಧಾನ ಪರಿಷತ್ ನ ಸದಸ್ಯರಾದ ಐವನ್ ಡಿಸೋಜಾ ರವರು ಆಡಿರುವಂತಹ ಮಾತು, ರಾಜ್ಯ ಭವನದಲ್ಲಿ ಬಾಂಗ್ಲ ದೇಶದ ರೀತಿಯಲ್ಲಿ ನಾವು ರಾಜ್ಯಭವನ ಮುತ್ತಿಗೆ ಹಾಕಿ, ರಾಜ್ಯಪಾಲರನ್ನು ಓಡಿಸುತ್ತೇವೆ ಎನ್ನುವ ರೀತಿಯ ಮಾತುಗಳನ್ನು ಐವನ್ ಡಿಸೋಜ ಆಡಿದ್ದಾರೆ. ಈ ಹೇಳಿಕೆಯನ್ನು ಖಂಡಿಸಿ ಅನೇಕರು ಐವನ್ ಡಿಸೋಜರವರ ಮೇಲೆ ಎಫ್ ಐ ಆರ್ ಮಾಡಬೇಕು ಎಂದು ಪೊಲೀಸ್‌ ಠಾಣೆಗೆ ದೂರು ಕೊಟ್ಟಿದ್ದರು. ಆದರೆ ಕಾಂಗ್ರೆಸ್ ಸರಕಾರದ ಒತ್ತಡಕ್ಕೆ ಪೊಲೀಸರು ಮಣಿದು, ದೇಶ ವಿರೋಧಿ ಹೇಳಿಕೆ ಕೊಟ್ಟಿರುವಂತಹ ವ್ಯಕ್ತಿಯ ಮೇಲೆ ಕೇಸು ಹಾಕದ ರೀತಿಯಲ್ಲಿ ಮಾಡಿದ್ದಾರೆ ಎಂದು ಆರೋಪಿಸಿದರು.


ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಜಯಾನಂದ ಗೌಡ, ಪ್ರಶಾಂತ್ ಪಾರೆಂಕಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗಣೇಶ್‌ ಗೌಡ ನಾವೂರು, ಉಮೇಶ್‌ ಕುಲಾಲ್, ರಾಜೇಶ್, ಸೀತಾರಾಮ್ ಬೆಳಾಲು, ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಲಾಯಿಲ ಗ್ರಾ.ಪಂ. ಅಧ್ಯಕ್ಷ ಗಣೇಶ್‌, ರಾಮಣ್ಣ ಕುಂಬಾರ, ಗಣೇಶ್ ನಾವರ, ಶಿವಾನಂದ ರಾವ್ ಕಕ್ಕೆನೇಜಿ ಹಾಗೂ ಯುವ ಮೊರ್ಚಾದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು

- Advertisement -
spot_img

Latest News

error: Content is protected !!