- Advertisement -
- Advertisement -
ಉಡುಪಿ: ಮೇ 10 ರಂದು ಬಿಜೆಪಿ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಸಮಾವೇಶ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಆ ವರ್ಗಗಳ ಜನರು ಸಮಾವೇಶಕ್ಕೆ ಬರಬೇಕು ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ.
ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಶಾಸಕರು, ನಗರ ಬಿಜೆಪಿ ಮತ್ತು ಗ್ರಾಮಾಂತರ ಬಿಜೆಪಿ ಈ ಸಮಾವೇಶವನ್ಬು ಹಮ್ಮಿಕೊಂಡಿದೆ.ನಗರದ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ನಡೆಯಲಿದೆ. ಸಮಾವೇಶದಲ್ಲಿ ಪರಿಶಿಷ್ಟ ವರ್ಗ ಮತ್ತು ಜಾತಿ ಜನರ ಕುಂದು ಕೊರತೆ ಸಮಸ್ಯೆ ಮತ್ತಿತರ ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ಸಮಾವೇಶದಲ್ಲಿ ನಿರ್ಣಯ ಕೈಗೊಂಡು ಸರ್ಕಾರಕ್ಕೆ ಕಳುಹಿಸಿ ಕೊಡಲಾಗುತ್ತದೆ. ಹೀಗಾಗಿ ಸಮಾವೇಶದಲ್ಲಿ ಹೆಚ್ಚಿನ ಜನರು ಅಗಮಿಸಿ ತಮ್ಮ ಕುಂದು ಕೊರತೆಗಳನ್ಬು ಗಮನಕ್ಕೆ ತರಬೇಕು ಎಂದು ಮನವಿ ಮಾಡಿದ್ದಾರೆ.
- Advertisement -