Thursday, May 16, 2024
Homeತಾಜಾ ಸುದ್ದಿಪಕ್ಷದ ಘನತೆಗೆ ಧಕ್ಕೆ ತರಬೇಡಿ:ಬಿಜೆಪಿ ರಾಜ್ಯ ಮುಖಂಡರಿಗೆ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೂಚನೆ

ಪಕ್ಷದ ಘನತೆಗೆ ಧಕ್ಕೆ ತರಬೇಡಿ:ಬಿಜೆಪಿ ರಾಜ್ಯ ಮುಖಂಡರಿಗೆ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೂಚನೆ

spot_img
- Advertisement -
- Advertisement -

ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕನ ಸ್ಥಾನ ಮತ್ತು ಪಕ್ಷದ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ನೇಮಕಾತಿ ವಿಚಾರದಲ್ಲಿ
ಪಕ್ಷದ ಘನತೆಗೆ ಧಕ್ಕೆ ತರದಿರಿ ಎಂದು ಬಿಜೆಪಿ ನಾಯಕರಿಗೆ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಸೂಚನೆ ನೀಡಿದ್ದಾರೆ.

ನೇಮಕಾತಿಗಳ ಕುರಿತು ಪಕ್ಷದ ನಾಯಕರು ಹೇಳಿಕೆಗಳನ್ನು ನೀಡಿ ಪಕ್ಷದ ಘನತೆಗೆ ಧಕ್ಕೆ ತರಬಾರದು, ವಿಪಕ್ಷ ನಾಯಕನ ಸ್ಥಾನ ಮತ್ತಿತರ ಹುದ್ದೆಗೆ ಸಂಬಂಧಿಸಿ ಪಕ್ಷದ ಕೇಂದ್ರ ಸಂಸದೀಯ ಮಂಡಳಿ ಸೂಕ್ತ ಸಮಯದಲ್ಲಿ ಸಮರ್ಥ ನಿರ್ಧಾರ ಪ್ರಕಟಿಸಲಿದೆ ಎಂದು ನಳೀನ್ ಕುಮಾರ್ ಕಟೀಲ್ ಸೂಚಿಸಿದ್ದಾರೆ.

ಅಲ್ಲದೇ ಪಕ್ಷದ ಕೆಲವು ನಾಯಕರು ಮಾಧ್ಯಮಗಳ ಮುಂದೆ ವಿವಿಧ ಹುದ್ದೆ ಕುರಿತು ಆಕಾಂಕ್ಷೆ ವ್ಯಕ್ತಪಡಿಸುವುದು ಗಮನಕ್ಕೆ ಬಂದಿದ್ದು, ಪಕ್ಷದ ಸಭೆಗಳಲ್ಲಿ ಈ ವಿಷಯವಾಗಿ ಚರ್ಚಿಸುತ್ತಿರುವುದು ಸರಿಯಲ್ಲ ಎಂದು ನಿರ್ದೇಶನ ನೀಡಿದ್ದಾರೆ.

ಇದೇ ವೇಳೆ, ಪಕ್ಷದ ಘನತೆಗೆ ಧಕ್ಕೆ ಉಂಟಾಗದಂತೆ ನಾಯಕರು ನೋಡಿಕೊಳ್ಳಬೇಕು ಎಂದು ತಿಳಿಸಿರುವ ಕಟೀಲ್,
ಪಕ್ಷದ ಆಂತರಿಕ ವಿಚಾರಗಳನ್ನು ಮಾಧ್ಯಮಗಳ ಮುಂದೆ ಚರ್ಚಿಸುವುದು ಸೂಕ್ತವಲ್ಲ ಎಂದು ಬಿಜೆಪಿ ರಾಜ್ಯ ಮುಖಂಡರಿಗೆ ನಳೀನ್ ಕುಮಾರ್ ಕಟೀಲ್ ಸೂಚನೆ ನೀಡಿದ್ದಾರೆ.

- Advertisement -
spot_img

Latest News

error: Content is protected !!