Monday, April 29, 2024
Homeತಾಜಾ ಸುದ್ದಿಕಾಂಗ್ರೆಸ್ ಹಿಂದು ಮತ ಬೇಡ ಎಂಬ ಹಂತಕ್ಕೆ ಬಂದಿದೆ, ನಾವು ಹಿಂದುಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿದ್ದೇವೆ:...

ಕಾಂಗ್ರೆಸ್ ಹಿಂದು ಮತ ಬೇಡ ಎಂಬ ಹಂತಕ್ಕೆ ಬಂದಿದೆ, ನಾವು ಹಿಂದುಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿದ್ದೇವೆ: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆ

spot_img
- Advertisement -
- Advertisement -

ಹುಬ್ಬಳ್ಳಿ: ಕಾಂಗ್ರೆಸ್‌ ಹಿಂದುಗಳ ಮತ ಬೇಡ ‌ಎನ್ನುವ ಹಂತಕ್ಕೆ ಬಂದು ನಿಂತಿದ್ದಾರೆ, ನಾವು ಹಿಂದುಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಜೆಡಿಎಸ್ ಪಕ್ಷದ ಮುಸ್ಲಿಂ ಮತಗಳನ್ನ ಓಲೈಕೆ ಮಾಡಲು ಸಿದ್ದರಾಮಯ್ಯ ನಿಂತಿದ್ದಾರೆ ಎಂದು ಹೇಳಿದ್ದಾರೆ.

ಪಠ್ಯ ಪುಸ್ತಕದಲ್ಲಿ ಕಾಂಗ್ರೆಸ್ ರಾಜಕಾರಣ ಮತ್ತು
ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ‌ ಎಂದು ಹೇಳಿರುವ ಕಟೀಲ್,
ಪಠ್ಯ ಪುಸ್ತಕದಲ್ಲಿ ತಪ್ಪುಗಳಿದ್ದರೆ ತಿದ್ದುವುದಾಗಿ ಸರ್ಕಾರ ಹೇಳಿದೆ‌ ಎಂದು ತಿಳಿಸಿದ್ದಾರೆ.

ಇದೇ ವೇಳೆ, ಶ್ರೀರಾಮಸೇನೆಯಿಂದ ಅಜಾನ್ ವಿರೋಧಿಸಿ ಎರಡನೇ ಹಂತದ ಹೋರಾಟ ವಿಚಾರಕ್ಕೆ ಪ್ರತಿಕ್ರಿಯಿಸಿದ ನಳೀನ್ ಕುಮಾರ್ ಕಟೀಲ್, ಸಂವಿಧಾನದಲ್ಲಿ ಎಲ್ಲಾ ಸಂಘಟನೆಗಳಿಗೆ ಪ್ರತಿಭಟನೆ ಮಾಡುವ ಅಧಿಕಾರವಿದೆ, ಆದರೆ ಅವರ ಅಜೆಂಡಾಗಳಿಗೆ ನಾವು ಮನ್ನಣೆ ನೀಡಲು ಆಗುವುದಿಲ್ಲ ಎಂದಿದ್ದಾರೆ.

ನಮ್ಮದು ಸರ್ವೇ ಜನ ಸುಖಿನೋ ಭವಂತು ಎನ್ನುವ ತತ್ವ. ಒಂದು ಸರ್ಕಾರದಲ್ಲಿದ್ದಾಗ ಸಂವಿಧಾನ ಆಧಾರದ ಮೇಲೆ ಕೆಲಸ ಮಾಡಬೇಕು. ಆ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದು ಹುಬ್ಬಳ್ಳಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!