ಉಡುಪಿ: ವಿಧಾನ ಪರಿಷತ್ ಚುನಾವಣೆಯ ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ತನ್ನ ಮೂಗಿನ ನೇರಕ್ಕೆ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಉಡುಪಿಯಲ್ಲಿ ಇಂದು ಮಾಜಿ ಶಾಸಕ ರಘುಪತಿ ಭಟ್ ಬಂಡಾಯ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ವಿಜಯೇಂದ್ರ,
ರಘುಪತಿ ಭಟ್ ಗೆ ಪಕ್ಷದಿಂದ ಯಾವತ್ತೂ ಅನ್ಯಾಯ ಆಗಿಲ್ಲ ಅವರಿಗೆ ಸಾಕಷ್ಟು ಅವಕಾಶ ಸಿಕ್ಕಿದೆ ಎಂದು ಹೇಳಿದ್ದಾರೆ.
ಅಲ್ಲದೇ, ರಾಜಕೀಯವಾಗಿ ಅವಕಾಶ ಸಿಗಬೇಕಾದವರು ಅನೇಕ ಮಂದಿ ಬಿಜೆಪಿಯಲ್ಲಿದ್ದು ಸಿಕ್ಕಿದವರಿಗೇ ಮತ್ತೆ ಮತ್ತೆ ಅವಕಾಶ ಸಿಗಬೇಕು ಎನ್ನುವುದು ಸರಿಯಲ್ಲ ಎಂದೂ ವಿಜಯೇಂದ್ರ ಹೇಳಿದ್ದಾರೆ.
ಇದೇ ವೇಳೆ, ರಘುಪತಿ ಭಟ್ ತಾನು ಗೆಲ್ಲುತ್ತೇನೆ ಎನ್ನುವ ಭ್ರಮೆಯಲ್ಲಿದ್ದು, ಬಿಜೆಪಿ ಪಕ್ಷ ಮತ್ತು ಸಂಘಟನೆ ಬಲಿಷ್ಠವಾಗಿದೆ ಎಂದು ಹೇಳಿರುವ ವಿಜಯೇಂದ್ರ, ಬಿಜೆಪಿ ಅಭ್ಯರ್ಥಿ ಡಾ.ಧನಂಜಯ್ ಸರ್ಜಿ ಅವರನ್ನು ದೊಡ್ಡ ಅಂತರದಲ್ಲಿ ಗೆಲ್ಲಿಸುತ್ತೇವೆ ಎಂದೂ ವಿಶ್ವಾಸ ವ್ಯಕ್ತಪಡಿಸಿದ್ದಾರೆ.