- Advertisement -
- Advertisement -
ಬೆಂಗಳೂರು: ಎಷ್ಟೇ ಸಿದ್ದರಾಮೋತ್ಸವ ಮಾಡಿದರೂ ಮುಂದಿನ ಬಾರಿ ಬಿಜೆಪಿಯೇ ಅಧಿಕಾರಕ್ಕೆ ಬರೋದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಭವಿಷ್ಯ ನುಡಿದಿದ್ದಾರೆ.
ಸಿದ್ದರಾಮೋತ್ಸವ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯರ 5 ವರ್ಷದ ಆಡಳಿತದಲ್ಲಿ ಜನ ಸಾಕಷ್ಟು ನೋವು ಅನುಭವಿಸಿದ್ದಾರೆ. ಜಾತಿ ಜಾತಿಗಳನ್ನ ಒಡೆಯೊ ಕೆಲಸ ಸಿದ್ದರಾಮಯ್ಯ ಮಾಡಿದ್ದಾರೆ. ಅಲ್ಪಸಂಖ್ಯಾತರನ್ನ ಬಹುಸಂಖ್ಯಾತರ ವಿರುದ್ಧ ಎತ್ತಿ ಕಟ್ಟಿದ್ದೇ ಸಿದ್ದರಾಮಯ್ಯ ಸಾಧನೆ ಎಂದು ಟೀಕಿಸಿದ್ದಾರೆ.
- Advertisement -