- Advertisement -
- Advertisement -
ಉಡುಪಿ: ನವಂಬರ್ 21 ಮತ್ತು 22ರಂದು ಎರಡು ದಿನಗಳ ಕಾಲ ಬಿಜೆಪಿ ಯುವ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆ ಉಡುಪಿಯಲ್ಲಿ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಇಂದು ಉಡುಪಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಸಭೆಯ ನಂತರ ಉಡುಪಿ ಶಾಸಕ ರಘುಪತಿ ಭಟ್ ಬಿಜೆಪಿ ಯುವ ಮೋರ್ಛಾ ಪದಾಧಿಕಾರಿಗಳ ಜೊತೆ ಕಾರ್ಯಕಾರಿಣಿ ಸಭೆ ನಡೆಯುವ ಸ್ಥಳ ವೀಕ್ಷಣೆ ಮಾಡಿದರು.
ಪೂರ್ವಭಾವಿ ಸಭೆಯಲ್ಲಿ ರಾಜ್ಯ ಬಿಜೆಪಿ ಯುವ ಮೋರ್ಛಾ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ಬಾಳಿಕಾಯಿ, ಅಜಿತ್ ಹೆಗಡೆ, ಉಪಾಧ್ಯಕ್ಷ ಹರ್ಷಿತ್ ವೆಂಕಟೇಶ್, ಕಾರ್ಯಕಾರಿಣಿ ಸದಸ್ಯ ಪ್ರಜ್ವಲ್ ಶೆಟ್ಟಿ, ಜಿಲ್ಲಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶರತ್ ಶೆಟ್ಟಿ, ವಿನೋದ್ ಶಾಂತಿನಿಕೇತನ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
- Advertisement -