Friday, June 27, 2025
Homeಕರಾವಳಿಮಂಗಳೂರು; ಬಾವಿಗೆ ಬಿದ್ದ ಬಲು ಅಪರೂಪದ ಕರಿ ಚಿರತೆ

ಮಂಗಳೂರು; ಬಾವಿಗೆ ಬಿದ್ದ ಬಲು ಅಪರೂಪದ ಕರಿ ಚಿರತೆ

spot_img
- Advertisement -
- Advertisement -

ಮಂಗಳೂರು; ಬಲು ಅಪರೂಪದ ಕರಿ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ಎಡಪದವಿನ ಗೊಸ್ಪೆಲ್ ಸನಿಲ ಎಂಬಲ್ಲಿ ಭಾನುವಾರ ನಡೆದಿದೆ.

ಇಲ್ಲಿನ ಶಕುಂತಳಾ ಆಚಾರ್ಯ ಅವರ ಮನೆಯ ಬಾವಿಯಿಂದ ನೀರು ತರಲು ಹೋದ ವೇಳೆ ಚಿರತೆ ಬಿದ್ದಿರುವುದು ಗಮನಕ್ಕೆ ಬಂದಿದೆ. ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯನ್ನು ಮೇಲೆತ್ತಲು ಬೆಳಗ್ಗಿನಿಂದಲೇ ಕಾರ್ಯಾಚರಣೆ ಆರಂಭಿಸಿದ್ದರು. ಮಧ್ಯಾಹ್ನದ ವೇಳೆಗೆ ಚಿರತೆಯನ್ನು ಸೆರೆ ಹಿಡಿದರು. ಕಾರ್ಯಾಚರಣೆಗಾಗಿ ಬಾವಿಯ ಸುತ್ತ ಬಲೆ ಹಾಕಿ ಬಾವಿಗೆ ಏಣಿ ಇಳಿಸಲಾಗಿತ್ತು. ಬಾವಿಯ ದಂಡೆಯ ಸಮೀಪ ಚಿರತೆ ಸೆರೆಗೆ ಬೋನು ಇಡಲಾಗಿತ್ತು.

ಎಡಪದವು ಪರಿಸರದ ಬೋರುಗುಡ್ಡೆ ಎಂಬಲ್ಲಿ ಕೆಲವು ದಿನಗಳಿಂದ ಚಿರತೆಯ ಉಪಟಳ ಹೆಚ್ಚಾಗಿತ್ತು. ಹಲವು ಮನೆಗಳ ಸಾಕು ನಾಯಿಗಳು ಹಾಗೂ ದನಗಳು ಚಿರತೆಗೆ ಆಹಾರವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!