- Advertisement -
- Advertisement -
ಕಾರ್ಕಳ: ಕ್ರಶರ್ ನಲ್ಲಿ ಸ್ಫೋಟ ಸಂಭವಿಸಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಿಟ್ಟೆ ಗ್ರಾಮದ ಗುಂಡ್ಯಡ್ಕದಲ್ಲಿ ನಡೆದಿದೆ. ವೆಂಕಟೇಶ್ ಮೃತ ಕಾರ್ಮಿಕ.
ದಿನೇಶ್ ಶೆಟ್ಟಿ ಎಂಬವರ ಮಾಲೀಕತ್ವದ ಗುಂಡ್ಯಡ್ಕ ಶ್ರೀಮಹಾಗಣಪತಿ ಕ್ರಶರ್ನಿಂದ ಸುಮಾರು 150 ಮೀಟರ್ ದೂರದಲ್ಲಿ ಕಲ್ಲುಗಳನ್ನು ಸ್ಫೋಟಿಸಿದ್ದು, ಈ ವೇಳೆ ಸಿಡಿದ ಕಲ್ಲು ಕೆಲಸ ಮಾಡುತ್ತಿದ್ದ ವೆಂಕಟೇಶ ಅವರ ತಲೆಯ ಮೇಲೆ ಬಿತ್ತೆನ್ನಲಾಗಿದೆ.
ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ.ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -