Tuesday, May 21, 2024
Homeಕರಾವಳಿಸ್ವಾತಂತ್ರ್ಯೋತ್ಸವದ ಪ್ರಯುಕ್ತ ರಕ್ತದಾನ ಶಿಬಿರ : ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ಕರೆ

ಸ್ವಾತಂತ್ರ್ಯೋತ್ಸವದ ಪ್ರಯುಕ್ತ ರಕ್ತದಾನ ಶಿಬಿರ : ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ಕರೆ

spot_img
- Advertisement -
- Advertisement -

ಬೆಂಗಳೂರು: ರಕ್ತದಾನವು ಅತ್ಯಂತ ಶ್ರೇಷ್ಠ ಕಾರ್ಯವಾಗಿದೆ. ಆದರೆ ಇಂದು ಸಕಾಲದಲ್ಲಿ ರಕ್ತ ದೊರಕದೆ ಅಸಂಖ್ಯಾತ ರೋಗಿಗಳು ಸಾವನ್ನಪ್ಪುತ್ತಿರುವ ಘಟನೆಗಳೂ ನಡೆಯುತ್ತಿರುತ್ತವೆ. ಭಾರತದಲ್ಲಿ ಪ್ರತಿ ವರ್ಷ ಸುಮಾರು 1.2 ಕೋಟಿ ಯುನಿಟ್ ರಕ್ತದ ಅಗತ್ಯವಿದ್ದು, 1.1 ಕೋಟಿ ಮಾತ್ರ ಲಭ್ಯವಿದೆ. ಇಲ್ಲಿ 11.5 ಲಕ್ಷ ಯುನಿಟ್ ರಕ್ತದ ಕೊರತೆ ಇದೆ ಎಂದು ಸರಕಾರದ ಸಚಿವಾಲಯದ ವರದಿ ಹೇಳುತ್ತವೆ. ಕೋವಿಡ್ ನಂತರದ ದಿನಗಳಲ್ಲಿ ರಕ್ತದ ಸಂಗ್ರಹಣೆಯಲ್ಲಿ ಮತ್ತಷ್ಟು ಸಂಕಷ್ಟ ಎದುರಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೇಶದಲ್ಲಿ ರಕ್ತದ ಕೊರತೆಯ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವು ರಕ್ತದಾನ ಕಾರ್ಯಕ್ಕೆ ಬಹಳಷ್ಟು ಮಹತ್ವ ನೀಡುತ್ತಾ ಬಂದಿದೆ. ಕಳೆದ ಎರಡು ದಶಕಗಳಿಂದಲೂ ಸಂಘಟನೆಯು ಜಾತಿ, ಮತ ಭೇದವಿಲ್ಲದೇ ರಕ್ತದಾನ ಶಿಬಿರ ಮತ್ತು ವೈಯಕ್ತಿಕ ರಕ್ತದಾನದ ಮೂಲಕ ತುರ್ತು ಸಂದರ್ಭಗಳಲ್ಲಿ ರಕ್ತ ಪೂರೈಕೆ ಮಾಡಿ ಜನರ ಜೀವ ಉಳಿಸುವ ಪ್ರಾಮಾಣಿಕ ಪ್ರಯತ್ನ ನಡೆಸುತ್ತಾ ಬರುತ್ತಿದೆ.

ಪಾಪ್ಯುಲರ್ ಫ್ರಂಟ್, ಮಾನವೀಯ ಸೇವೆಯನ್ನು ವ್ಯಾಪಕಗೊಳಿಸುವ, ರಕ್ತದ ಕೊರತೆ ನೀಗಿಸುವ, ಜನರಲ್ಲಿ ಜಾಗೃತಿ ಮೂಡಿಸಿ ಅವರನ್ನು ರಕ್ತದಾನಕ್ಕೆ ಪ್ರೇರೇಪಿಸುವ ಒಂದು ವಿಶಾಲ ಪರಿಕಲ್ಪನೆಯೊಂದಿಗೆ ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ಎಂಬ ರಾಷ್ಟ್ರ ಮಟ್ಟದ ವೇದಿಕೆಗೂ ಚಾಲನೆ ನೀಡಿದೆ. ಅದರಂತೆ ಕರ್ನಾಟಕದಲ್ಲಿಯೂ ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ವೇದಿಕೆಯನ್ನು ರಚಿಸಲಾಗಿದೆ.

ಇದೀಗ ಜುಲೈ 15ರಿಂದ ಆಗಸ್ಟ್ 15ರ ವರೆಗೆ ರಾಜ್ಯಾದ್ಯಂತ ಬ್ಲಡ್ ಡೋನರ್ಸ್ ಫೋರಂ ಸದಸ್ಯತ್ವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಅಭಿಯಾನದ ಅಂಗವಾಗಿ 75ನೇ ಸ್ವಾತ್ರಂತ್ರ್ಯೋತ್ಸವ ದಿನದಂದು ರಾಜ್ಯಾದ್ಯಂತ 50ಕ್ಕೂ ಹೆಚ್ಚು ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗಿದ್ದು, 10 ಸಾವಿರ‌ ಯುನಿಟ್ ರಕ್ತವನ್ನು ಸಂಗ್ರಹಿಸುವ ಗುರಿ ಹೊಂದಲಾಗಿದೆ. ರಕ್ತದಾನಿಗಳು ಸಹಸ್ರ ಸಂಖ್ಯೆಯಲ್ಲಿ ಪಾಲ್ಗೊಂಡು ಈ ರಕ್ತದಾನ ಶಿಬಿರವನ್ನು ಯಶಸ್ವಿಗೊಳಿಸಬೇಕು. ಈ ಮೂಲಕ ಅಗತ್ಯ ಹಾಗೂ ತುರ್ತು ಸಂದರ್ಭಗಳಲ್ಲಿ ರಕ್ತದ ಕೊರತೆಯನ್ನು ನೀಗಿಸಲು ಮತ್ತು ಜನರ ಜೀವ ಉಳಿಸುವ ಮಾನವೀಯ ಸೇವೆಯಲ್ಲಿ ಕೈಜೋಡಿಸಬೇಕೆಂದು ನಾವು ವಿನಂತಿಸಿಕೊಳ್ಳುತ್ತಿದ್ದೇವೆ.

ಇಂದು ಬೆಂಗಳೂರಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ,ಎ.ಕೆ.ಅಶ್ರಫ್, ರಾಜ್ಯ ಕಾರ್ಯದರ್ಶಿ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ, ಕರ್ನಾಟಕ,ಅಬೂ ಸಿನಾನ್, ರಾಜ್ಯ ಸಂಚಾಲಕರು, ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ,ಅಬ್ದುಲ್ ಮಜೀದ್ ಜೋಕಟ್ಟೆ, ರಾಜ್ಯ ಉಪ ಸಂಚಾಲಕರು, ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ,ಇಲ್ಯಾಸ್ ಅಹ್ಮದ್, ಝೋನಲ್ ಅಧ್ಯಕ್ಷರು, ಬೆಂಗಳೂರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!