- Advertisement -
- Advertisement -
ಮಡಿಕೇರಿ: ಕೊಡಗು ಜಿಲ್ಲೆಯ ಭಾಗಮಂಡಲದಲ್ಲಿ ಹೆಚ್ಚಾದ ಕಾವೇರಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ.
ಈ ಹಿನ್ನೆಲೆಯಲ್ಲಿ ಭಾಗಮಂಡಲ-ನಾಪೋಕ್ಲು ರಸ್ತೆ ಸಂಚಾರ ಸ್ಥಗಿತವಾಗಿದ್ದು ಭಾಗಮಂಡಲಕ್ಕೆ ಕೊಡಗು ಜಿಲ್ಲಾಡಳಿತ ಬೋಟ್ ರವಾನಿಸಿದೆ.
ಬೋಟ್ ಮೂಲಕ ಜನರನ್ನು ರಕ್ಷಣಾ ಸಿಬ್ಬಂದಿ ನದಿ ದಾಟಿಸುತ್ತಿದ್ದಾರೆ.
ಭಾಗಮಂಡಲ-ಮಡಿಕೇರಿ ರಸ್ತೆ ಮೇಲೆ ಕೂಡಾ ಕಾವೇರಿ ನೀರು ಹರಿಯುತ್ತಿದೆ.
ಕೊಡಗು ಜಿಲ್ಲೆಯಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಭೂ ಕುಸಿತದ ನಡುವೆಯೇ ಕಾವೇರಿ ನದಿಯಲ್ಲಿ ನೀರಿನ ಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ.
- Advertisement -