- Advertisement -
- Advertisement -
ಕಾರವಾರ : ಈಗಾಗಲೇ ಸಮುದ್ರಕ್ಕೆ ಇಳಿಯುವ ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಿದೆ. ಸುಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾದ್ದರಿಂದ 2 ಬೊಟ್ ಸಮುದ್ರದಲ್ಲಿ ಮುಳುಗಡೆಯಾಗಿದೆ. ಹವಾಮಾನ ವೈಪರಿತ್ಯದಿಂದ ಅರಬ್ಬಿ ಸಮುದ್ರದಲ್ಲಿ ಅಲೆಗಳ ಅಬ್ಬರಕ್ಕೆ ಬೋಟ್ ಗಳು ಗೋವಾದ ಪಣಜಿ ಬಳಿಯ ಅರಬ್ಬಿ ಸಮುದ್ರದಲ್ಲಿ ಮಾತಾ ಜಟಗೇಶ್ವರ ಮತ್ತು ಪಲ್ಲಕ್ ಹೆಸರಿನ ಬೋಟ್ ಮುಳುಗಡೆಯಾಗಿದೆ.
ಮಲ್ಪೆಯಿಂದ ಗೋವಾಕ್ಕೆ ಮೂರು ಬೋಟ್ಗಳು ಮೀನುಗಾರಿಕೆಗೆ ತೆರಳಿದ್ದವು, ಈ ಸಂದರ್ಭ ಇಂಜಿನ್ ಕೂಡ ಕೈ ಕೊಟ್ಟಿದೆ ಎನ್ನಲಾಗಿದೆ. ಮುಳುಗಡೆಯಾದ ಎರಡು ಬೋಟ್ನಲ್ಲಿ ಇದ್ದ ಏಳು ಮಂದಿಯನ್ನು ಸ್ಥಳೀಯ ಮೀನುಗಾರರು ಹಾಗೂ ಗೋವಾದ ಕೋಸ್ಟ್ ಗಾರ್ಡ್ ಪೊಲೀಸರು ರಕ್ಷಣೆ ಮಾಡಿದ್ದಾರೆ.
- Advertisement -