- Advertisement -
- Advertisement -
ಉಕ್ರೇನ್ನಲ್ಲಿ ರಷ್ಯಾದ ಶೆಲ್ ದಾಳಿಗೆ ಸಾವನ್ನಪ್ಪಿದ ರಾಜ್ಯದ ಭಾರತೀಯ ವಿದ್ಯಾರ್ಥಿ ನವೀನ್ ಶೇಖರಪ್ಪ ಜ್ಞಾನಗೌಡರ ಮೃತದೇಹವನ್ನು ಅಧಿಕಾರಿಗಳು ಹೊರತೆಗೆದು, ಶವಾಗಾರದಲ್ಲಿ ಸಂರಕ್ಷಿಸಲಾಗಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಹೇಳಿದ್ದಾರೆ.
‘‘ಈ ಸಂಬಂಧ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರೊಂದಿಗೆ ಮಾತನಾಡಿದ್ದೇನೆ, ಶವವನ್ನು ಎಂಬಾಮ್ ಮಾಡಿ ಶವಾಗಾರದಲ್ಲಿ ಸಂರಕ್ಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಶೆಲ್ ದಾಳಿ ನಿಲ್ಲಿಸಿದ ತಕ್ಷಣ ಅದನ್ನು ತರಲು ಪ್ರಯತ್ನಿಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ” ಎಂದು ಅವರು ಹೇಳಿದರು.
“ನಿರಂತರ ಪ್ರಯತ್ನಗಳನ್ನು ಮಾಡಲಾಗುತ್ತಿದೆ, ಶವವನ್ನು ಇರಿಸಲಾಗಿರುವ ಶವಾಗಾರದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ರಾಯಭಾರ ಕಚೇರಿ ಅಧಿಕಾರಿಗಳು ನಮಗೆ ತಿಳಿಸಿದ್ದಾರೆ” ಎಂದು ಅವರು ಹೇಳಿದರು.
- Advertisement -