ಮುಂಬೈ:ಅಶ್ಲೀಲ ಚಿತ್ರಗಳ ನಿರ್ಮಾಣದ ಆರೋಪದ ಮೇಲೆ ಬಂಧಿತರಾಗಿದ್ದ ಶಿಲ್ಪಾ ಶೆಟ್ಟಿ ಅವರ ಪತಿ ಹಾಗೂ ಉದ್ಯಮಿಯಾಗಿರುವ ರಾಜ್ ಕುಂದ್ರಾ ಅವರಿಗೆ ಮುಂಬೈ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.
ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಆಗಸ್ಟ್ 25ಕ್ಕೆ ಮುಂದೂಡಿದೆ.ವಾರದ ಹಿಂದೆ ರಾಜ್ ಕುಂದ್ರಾ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂಬೈನ ಸೆಷನ್ ಕೋರ್ಟ್ ನಡೆಸಿದ್ದು, ಈ ವಿಚಾರಣೆಯನ್ನು ಕೋರ್ಟ್ ಆಗಸ್ಟ್ 20ರವರೆಗೆ ಮುಂದೂಡಿತ್ತು.
ರಾಜ್ ಕುಂದ್ರಾಗೆ ಜಾಮೀನು ನೀಡಿದರೆ ಆಗುವ ತೊಂದರೆಗಳೇನು? ಅವರಿಗೆ ಏಕೆ ಜಾಮೀನು ನೀಡಬಾರದು ಎನ್ನುವ ಬಗ್ಗೆ ಮುಂಬೈ ಕ್ರೈಮ್ ಬ್ರ್ಯಾಂಚ್ನವರು 19 ಕಾರಣಗಳನ್ನು ನೀಡಿದ್ದರು. ಈ ಕಾರಣಕ್ಕೆ ಸೆಷನ್ ಕೋರ್ಟ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದೆ ಎನ್ನಲಾಗಿದೆ. ಈ ಕಾರಣಕ್ಕೆ ನಿರೀಕ್ಷಣಾ ಜಾಮೀನು ನೀಡಬೇಕು ಎಂದು ಕೋರಿ ರಾಜ್ ಕುಂದ್ರಾ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಈಗ ಅರ್ಜಿ ವಿಚಾರಣೆಗೆ ಹೈಕೋರ್ಟ್ ಸಮ್ಮತಿಸಿದೆ.
ನೀಲಿ ಸಿನಿಮಾ ನಿರ್ಮಾಣ ಮಾಡಿ ಅದನ್ನು ಹಂಚುವ ಕೆಲಸವನ್ನು ರಾಜ್ ಕುಂದ್ರಾ ಮಾಡುತ್ತಿದ್ದರು. ಆದರೆ, ತಾವು ನಿರ್ಮಾಣ ಮಾಡುತ್ತಿದ್ದುದು ನೀಲಿ ಚಿತ್ರ ಅಲ್ಲ ಎಂದಿದ್ದಾರೆ ರಾಜ್ ಕುಂದ್ರಾ. ಈಗ ಅವರು ಜೈಲಿನಿಂದ ಹೊರ ಬರೋಕೆ ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಇದು ಸಾಧ್ಯವಾಗುತ್ತಿಲ್ಲ. ಇನ್ನು, ರಾಜ್ ಕುಂದ್ರಾ ಬಂಧನದ ನಂತರ ಶಿಲ್ಪಾ ಶೆಟ್ಟಿ ಜನಪ್ರಿಯತೆಗೆ ಪೆಟ್ಟು ಬಿದ್ದಿದೆ. ಅನೇಕ ಬ್ರ್ಯಾಂಡ್ಗಳು ಅವರ ಜತೆಗಿನ ಒಪ್ಪಂದ ರದ್ದು ಮಾಡಿಕೊಳ್ಳಲು ಮುಂದಾಗಿವೆ ಎನ್ನಲಾಗಿದೆ.