- Advertisement -
- Advertisement -
ಮುಂಬೈ: ರಾಜ್ ಕುಂದ್ರಾ ತಮ್ಮ ಬಂಧನದ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಶನಿವಾರ ತಿರಸ್ಕರಿಸಿದೆ.
ತಮ್ಮ ಬಂಧನವನ್ನು ಪ್ರಶ್ನಿಸಿ ಮತ್ತು ತತ್ಕ್ಷಣದ ಬಿಡುಗಡೆಯನ್ನು ಕೋರಿ ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರಾ ಮೇಲ್ಮನವಿಯನ್ನು ಸಲ್ಲಿಸಿದ್ದರು. ಆದರೆ ನ್ಯಾಯಾಲಯವು ರಾಜ್ ಕುಂದ್ರಾ ಹಾಗೂ ರಿಯಾನ್ ಥಾರ್ಪೆ ಅವರ ಮೇಲ್ಮನವಿಯನ್ನು ತಿರಸ್ಕರಿಸಿದ್ದು, ರಾಜ್ ಕುಂದ್ರಾ ಬಂಧನ ಮುಂದುವರೆಯಲಿದೆ ಎಂದು ಎಎನ್ಐ ವರದಿ ಮಾಡಿದೆ.
ಜು. 27ರಂದು ರಾಜ್ ಕುಂದ್ರಾ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧಕ್ಕೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿತ್ತು.ಈ ಸಂಬಂಧ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದ ರಾಜ್ ಕುಂದ್ರಾ ತಕ್ಷಣ ಬಿಡುಗಡೆ ಮಾಡುವಂತೆ ಕೋರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ ಎಸ್ ಗಡ್ಕರಿ ಅವರು ಅರ್ಜಿ ಸಲ್ಲಿಸಿರುವವರ ಬಂಧನ ಕಾನೂನು ಬದ್ಧವಾಗಿದೆ ಎಂದು ಹೇಳುವ ಮೂಲಕ ಮನವಿಯನ್ನು ತಿರಸ್ಕರಿಸಿದ್ದಾರೆ.
- Advertisement -