- Advertisement -
- Advertisement -
ಉಡುಪಿ : ತಾಯಿಯ ಕಣ್ಣ ಮುಂದೆಯೇ ನೀರಿನಲ್ಲಿ ಮುಳುಗಿ ಬಾಲಕ ಮೃತಪಟ್ಟ ಘಟನೆ ಬೈಂದೂರು ತಾಲೂಕಿನ ಮದ್ದೋಡಿಯಲ್ಲಿ ನಡೆದಿದೆ. ಅನಿಲ್ (7) ಮೃತ ಬಾಲಕ.
ಅಮ್ಮನ ಜೊತೆ ಬಟ್ಟೆ ತೊಳೆಯಲೇ ಹೋಗಿದ್ದ ಅನಿಲ್ ನೀರಿನಲ್ಲಿ ಆಟವಾಡುತ್ತಾ ಕುಳಿತಿದ್ದಾನೆ. ಈ ವೇಳೆ ಆಯತಪ್ಪಿ ನೀರಿಗೆ ಬಿದ್ದಿದ್ದಾನೆ.ಮಗ ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡ ತಾಯಿ ರಕ್ಷಿಸಲು ಮುಂದಾದರೂ ಸಾಧ್ಯವಾಗಲಿಲ್ಲ.
ಅನಿಲ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಬೈಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -