Tuesday, May 7, 2024
Homeಕರಾವಳಿನೇತ್ರಾವತಿ ಸೇತುವೆಯ ಅನಾಥ ಬೈಕ್ ಪತ್ತೆ ಪ್ರಕರಣಕ್ಕೆ ತಿರುವು: ಶಿವಮೊಗ್ಗದಲ್ಲಿ ಪತ್ತೆಯಾದ ಯುವಕ

ನೇತ್ರಾವತಿ ಸೇತುವೆಯ ಅನಾಥ ಬೈಕ್ ಪತ್ತೆ ಪ್ರಕರಣಕ್ಕೆ ತಿರುವು: ಶಿವಮೊಗ್ಗದಲ್ಲಿ ಪತ್ತೆಯಾದ ಯುವಕ

spot_img
- Advertisement -
- Advertisement -

ಮಂಗಳೂರು: ಉಳ್ಳಾಲದ ನೇತ್ರಾವತಿ ಸೇತುವೆಯಲ್ಲಿ ಬೈಕ್ ನಿಲ್ಲಿಸಿ ಯುವಕನೋರ್ವ ನಾಪತ್ತೆಯಾಗಿ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದ್ದ ಪ್ರಕರಣ ಇದೀಗ ಸುಖಾಂತ್ಯ ಕಂಡಿದ್ದು, ನಾಪತ್ತೆಯಾಗಿದ್ದ ಯುವಕ ಶಿವಮೊಗ್ಗದಲ್ಲಿ ಪತ್ತೆಯಾಗಿದ್ದು. ಈ ಕುರಿತು ಮನೆಯವರಿಗೆ ಮಾಹಿತಿ ನೀಡಿದ್ದಾನೆ.

ಖಾಸಗಿ ಕಂಪನಿಯೊಂದರಲ್ಲಿ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಕುರ್ನಾಡು ನಿವಾಸಿ ಪ್ರವೀಣ್ ಸಪಲ್ಯ ಎಂಬಾತನ ಬೈಕ್ ಅನಾಥ ಸ್ಥಿತಿಯಲ್ಲಿ ನೇತ್ರಾವತಿ ನದಿ ತಟದಲ್ಲಿ ಪತ್ತೆಯಾಗಿತ್ತು. ಕಳೆದ ರಾತ್ರಿ ಏಳು ಗಂಟೆಯ ಸುಮಾರಿಗೆ ಕಚೇರಿಯಿಂದ ಹೊರಟಿದ್ದ ಈತ ನಂತರ ಯಾರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ. ಹೀಗಾಗಿ ಈತ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು.

ಇಂದು ಬೆಳಿಗ್ಗೆಯಿಂದಲೇ ಸೇತುವೆ ಸುತ್ತ ಜನರು ಸೇರಿದ್ದು, ಹುಡುಕಾಟ ನಡೆಸಿದ್ದರು. ಆದರೆ ಇದೀಗ ತಾನು ಶಿವಮೊಗ್ಗದಲ್ಲಿ ಇರುವುದಾಗಿ ತಿಳಿಸಿದ್ದಾನೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!