- Advertisement -
- Advertisement -
ಕಾಸರಗೋಡು: ಬಾಯಾರು ಕನಿಯಾಲ ಅನಂತಗಿರಿಯ ಗೋಪಾಲ ನಾಯಕ್ ಎಂಬವರ ಪುತ್ರ ಅಡ್ಯನಡ್ಕ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಅಂಕಿತ್ ನಾಯಕ್ ಭಾನುವಾರ ಸಂಜೆಯಿಂದ ನಾಪತ್ತೆಯಾಗಿದ್ದ. ಇದೀಗ ಆತ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾನೆ ಎನ್ನಲಾಗಿದೆ.
ಭಾನುವಾರ ಸಂಜೆ ನೆರೆ ಮನೆಗೆ ಹೋಗಿ ಬರುತ್ತೇನೆಂದು ತಂದೆಯವರ KL14 T 9764 ಹೊಂಡಾ ಅಕ್ವಿವಾವನ್ನು ತೆಗೆದುಕೊಂಡು ಹೋದವ ಬಳಿಕ ಬಾರದಿರುವುದನ್ನು ಗಮನಿಸಿ ಮನೆಯವರು ಸಂಜೆ 6 ಗಂಟೆಯಿಂದ ಹುಡುಕಾಟ ನಡೆಸಿದ್ದರು. ಈ ನಡುವೆ ಬೈಕನ್ನು ಬಾಯಾರು ಬಳ್ಳೂರು ಬಸ್ಟೆಂಡ್ ಪರಿಸರದಲ್ಲಿ ಉಪೇಕ್ಷಿಸಿ ಅಲ್ಲಿಂದ ಖಾಸಗಿ ಬಸ್ಸಿನಲ್ಲಿ ವಿಟ್ಲ ಕುದ್ದುಪದವು ಕಡೆಗೆ ತೆರಳಿರುವುದಾಗಿ ಮನೆಯವರಿಗೆ ಮಾಹಿತಿ ಲಭಿಸಿತ್ತು.
ಈ ಬಗ್ಗೆ ಮಂಜೇಶ್ವರ ಪೋಲಿಸ್ ಠಾಣೆಗೆ ದೂರು ನೀಡಲಾಗಿತ್ತು. ಅದರಂತೆ ಇದೀಗ ಅಂಕಿತ್ ನಾಯಕ್ ಬೆಂಗಳೂರಿನಲ್ಲಿ ಪತ್ತೆಯಾಗಿದ್ದು,ಹೆತ್ತವರು ನಿಟ್ಟುಸಿರು ಬಿಟ್ಟಿದ್ದಾರೆ.
- Advertisement -