Saturday, May 18, 2024
Homeತಾಜಾ ಸುದ್ದಿಗಾಂಜಾ ನಶೆಯಲ್ಲಿ ಚಿಕ್ಕಪ್ಪನನ್ನೇ ಕೊಂದ ಅಪ್ರಾಪ್ತ ಬಾಲಕ

ಗಾಂಜಾ ನಶೆಯಲ್ಲಿ ಚಿಕ್ಕಪ್ಪನನ್ನೇ ಕೊಂದ ಅಪ್ರಾಪ್ತ ಬಾಲಕ

spot_img
- Advertisement -
- Advertisement -

ಕೋಲಾರ: ಗಾಂಜಾ ನಶೆಯಲ್ಲಿ ಅಪ್ರಾಪ್ತ ಬಾಲಕನೊಬ್ಬ ಚಾಕುವಿನಿಂದ ತನ್ನ ಚಿಕ್ಕಪ್ಪನನ್ನೇ ಇರಿದು ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ.

ಕಳೆದ ರಾತ್ರಿ ಕೊಲೆಯಾದ ವಿಜಯ್ ಕುಮಾರ್ ಹಾಗೂ ಆರೋಪಿ ಇಬ್ಬರು ಒಟ್ಟಿಗೆ ಗಾಂಜಾ ಹೊಡೆದು ಕ್ಷುಲ್ಲಕ ಕಾರಣಕ್ಕೆ ತಮ್ಮ ಮನೆ ಬಳಿ ಜಗಳ ಮಾಡಿಕೊಂಡಿದ್ದಾರೆ. ಈ ವೇಳೆ ಇಬ್ಬರೂ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ ಕೈಕೈ ಮಿಲಾಯಿಸಿದ್ದಾರೆ. ನಶೆಯಲ್ಲಿದ್ದ ಚಿಕ್ಕಪ್ಪ ಮನೆಯ ಮುಂದೆ ಮಲಗಿದ್ದ ವೇಳೆ ದಾಳಿ ಮಾಡಿರುವ ಆರೋಪಿ, ಚಾಕುವಿನಿಂದ ಕುತ್ತಿಗೆಗೆ ಚುಚ್ಚಿದ್ದಾನೆ. ತೀವ್ರ ರಕ್ತ ಸ್ರಾವವಾಗಿ ತಂದೆ ಸಮಾನದ ವಿಜಯ್ ಕುಮಾರ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇದನ್ನ ಗಮನಿಸಿದ ಗ್ರಾಮಸ್ಥರು ಆರೋಪಿಯನ್ನ ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿ, ಮಾಲೂರು ಪೊಲಿಸರಿಗೆ ಒಪ್ಪಿಸಿದ್ದಾರೆ.

ಕೊಲೆಯಾದ ವಿಜಯ್ ಕುಮಾರ್ ಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ದು, ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ. ಹೆಂಡತಿಯೂ ಸಹ ಈತನ ಕುಡಿತದ ಕಾಟ ತಾಳದೆ ತನ್ನ ತವರು ಮನೆ ಸೇರಿದ್ದಾಳೆ. ಕೆಲ ದಿನಗಳ ನಂತರ ಹೆಂಡತಿಯ ತವರೂರಿಲ್ಲಿಯೇ ಬಿಡಾರ ಹೂಡಿದ್ದ ಈತ ವಾರಕ್ಕೊಮ್ಮೆ ಬೆನ್ನಘಟ್ಟ ಗ್ರಾಮಕ್ಕೆ ಬರುತ್ತಿದ್ದ. ಆದರೆ ನಶೆಯಲ್ಲಿದ್ದ ಅಣ್ಣನ ಮಗನೊಂದಿಗೆ ಜಗಳ ಮಾಡುತ್ತಿದ್ದ. ಗ್ರಾಮಸ್ಥರು, ಇವರಿಬ್ಬರದು ಮಾಮೂಲಿ ಎಂದುಕೊಂಡಿದ್ದರು. ಓದು ಬಿಟ್ಟು ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ಅಣ್ಣನ ಮಗ ಗಾಂಜಾಗೆ ದಾಸನಾಗಿದ್ದ.  

ಕಳೆದ ಒಂದು ತಿಂಗಳ ಹಿಂದಷ್ಟೆ ಆರೋಪಿ ತನ್ನ ತಂದೆಯನ್ನ ಕಳೆದುಕೊಂಡಿದ್ದ. ಬಳಿಕ ತಂದೆ ಸಮಾನರಾಗಿದ್ದ ಚಿಕ್ಕಪ್ಪನೊಂದಿಗೆ ಹಗಲಿನಲ್ಲಿ ಸ್ನೇಹಿತರಂತೆ ಇರುತ್ತಿದ್ದರು. ರಾತ್ರಿಯಾಗುತ್ತಿದ್ದಂತೆ ದಾಯಾದಿಗಳಾಗಿ ಕಿತ್ತಾಡಿಕೊಳ್ಳುತ್ತಿದ್ದರು. ನಿನ್ನೆ ಇದೇ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಈ ಸಂಬಂಧ ಮಾಲೂರು ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ.

- Advertisement -
spot_img

Latest News

error: Content is protected !!