Monday, June 30, 2025
Homeತಾಜಾ ಸುದ್ದಿಗಣರಾಜ್ಯೋತ್ಸವ ಪಥಸಂಚಲನಕ್ಕೆ ಬ್ರಹ್ಮಶ್ರೀ ನಾರಾಯಣಗುರುಗಳ ಸ್ತಬ್ದಚಿತ್ರ ನಿರಾಕರಣೆ ಕೇಂದ್ರದ ನಡೆ ಖಂಡನೀಯ-ರಕ್ಷಿತ್ ಶಿವರಾಂ

ಗಣರಾಜ್ಯೋತ್ಸವ ಪಥಸಂಚಲನಕ್ಕೆ ಬ್ರಹ್ಮಶ್ರೀ ನಾರಾಯಣಗುರುಗಳ ಸ್ತಬ್ದಚಿತ್ರ ನಿರಾಕರಣೆ ಕೇಂದ್ರದ ನಡೆ ಖಂಡನೀಯ-ರಕ್ಷಿತ್ ಶಿವರಾಂ

spot_img
- Advertisement -
- Advertisement -

ಬೆಳ್ತಂಗಡಿ: ಒಂದೇ ಜಾತಿ ಒಂದೇ ಮತ ಒಂದೇ ದೇವರು ಅನ್ನೋ ತತ್ತ್ವವನ್ನು ಮನುಕುಲಕ್ಕೆ ಸಾರಿದ ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣಗುರುಗಳ ಸ್ತಬ್ಧಚಿತ್ರವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ್ದು ಇಡೀ ಮನುಕುಲಕ್ಕೆ ಮಾಡಿದ ಅಪಚಾರ ಎಂದು ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ವಿಶ್ವದ ಮಾನವ ಜನಾಂಗದ ಅಭಿವೃದ್ದಿಗಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟ ಮಹಾನ್ ಸಂತನ ನೆನಪಿಗಾಗಿ ಕೇರಳ ರಾಜ್ಯ ಕಳಿಸಿದ ಸ್ತಬ್ದಚಿತ್ರವನ್ನು ತಿರಸ್ಕರಿಸಿರುವುದು ಖಂಡನೀಯ, ಶತಮಾನದ ಹಿಂದಿನಿಂದಲೂ ಅಸ್ಪೃಶ್ಯತೆಯ ವಿರುದ್ಧ ಸಿಡಿದೆದ್ದು, ಸಮಾನತೆಯ ಸುಧಾರಣೆಗೆ ತಮ್ಮನ್ನು ತಾವು ತೊಡಗಿಸಿಕೊಂಡಿದ್ದ ಮಹಾನ್ ಸಂತರ ಸ್ತಬ್ದ ಚಿತ್ರಕ್ಕೆ ಅನುಮತಿ ನೀಡಬೇಕು, ಈಗಾಗಲೇ ಅನುಮತಿ ತಿರಸ್ಕರಿಸಿದ ಸಮಿತಿಯು ಕೂಡಲೇ ಈ ಬಗ್ಗೆ ಪುನರ್ ವಿಮರ್ಶಿಸಿ ಕ್ರಮ ಕೈಗೊಳ್ಳಬೇಕೆಂದು ರಕ್ಷಿತ್ ಶಿವರಾಂ ಒತ್ತಾಯಿಸಿದ್ದಾರೆ.

- Advertisement -
spot_img

Latest News

error: Content is protected !!