Friday, May 10, 2024
Homeಕರಾವಳಿಉಡುಪಿಉಡುಪಿ: ಉಸಿರಾಟದ ಸಮಸ್ಯೆಯಿಂದ ಯುವಕ ಸಾವು

ಉಡುಪಿ: ಉಸಿರಾಟದ ಸಮಸ್ಯೆಯಿಂದ ಯುವಕ ಸಾವು

spot_img
- Advertisement -
- Advertisement -

ಉಡುಪಿ: ಉಸಿರಾಟದ ಸಮಸ್ಯೆಯಿಂದಾಗಿ ಯುವಕನೋರ್ವ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಪೆಜಮಂಗೂರು ಎಂಬಲ್ಲಿ ನಡೆದಿದೆ.

ಪೆಜಮಂಗೂರಿನ ಮೊಗವೀರ ಪೇಟೆ ನಿವಾಸಿ ಗಣೇಶ್ (23) ಮೃತ ಯುವಕ. ಈತ ಸುಮಾರು 5 ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು, ಈ ಬಗ್ಗೆ ಮಾನಸಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ನಿನ್ನೆ ಮುಂಜಾನೆ ತೀವ್ರ ಉಸಿರಾಟದ ಸಮಸ್ಯೆಯಿಂದ ಒದ್ದಾಡುತ್ತಿದ್ದ. ತಕ್ಷಣವೇ ಮನೆಯವರು ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಢು ಹೋಗಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಗಣೇಶ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.ಈ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!