Friday, June 27, 2025
Homeಕರಾವಳಿಪುತ್ತೂರು; ಬಿಜೆಪಿ ಕಾರ್ಯಕರ್ತ ಜಯಾನಂದ ಬಂಗೇರ ಮೇಲೆ ಕಾಂಗ್ರೆಸ್ ಗೂಂಡಾಗಿರಿ ಪ್ರಕರಣ: ಕಾಂಗ್ರೆಸ್ ನ ಗೂಂಡಾಗಿರಿ ...

ಪುತ್ತೂರು; ಬಿಜೆಪಿ ಕಾರ್ಯಕರ್ತ ಜಯಾನಂದ ಬಂಗೇರ ಮೇಲೆ ಕಾಂಗ್ರೆಸ್ ಗೂಂಡಾಗಿರಿ ಪ್ರಕರಣ: ಕಾಂಗ್ರೆಸ್ ನ ಗೂಂಡಾಗಿರಿ  ವರ್ತನೆಯನ್ನು ಸಹಿಸಲ್ಲ ಎಂದ ಕ್ಯಾಪ್ಟನ್ ಬ್ರಿಜೇಶ್ ಚೌಟ

spot_img
- Advertisement -
- Advertisement -

ಪುತ್ತೂರು; ಬಿಜೆಪಿ ಕಾರ್ಯಕರ್ತ ಜಯಾನಂದ ಬಂಗೇರ ಮೇಲೆ ಕಾಂಗ್ರೆಸ್ ಗೂಂಡಾಗಿರಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಪ್ರತಿಕ್ರಿಯಿಸಿದ್ದು  ಕಾಂಗ್ರೆಸ್ ನ ಗೂಂಡಾಗಿರಿ  ವರ್ತನೆಯನ್ನು ಸಹಿಸಲ್ಲ ಎಂದಿದ್ದಾರೆ. ಅಲ್ಲದೇ ಬಿಜೆಪಿ ಕಾರ್ಯಕರ್ತ ಜಯಾನಂದ ಬಂಗೇರ ಮೇಲಿನ ಕಾಂಗ್ರೆಸ್ ಗೂಂಡಾಗಿರಿ ಖಂಡನೀಯ ಎಂದು ಹೇಳಿದ್ದಾರೆ.

ಪುತ್ತೂರಿನ ಶಾಸಕರ 1400 ಕೋಟಿಯ ಅನುದಾನದ ಬಗ್ಗೆ ಮಾಹಿತಿ ಕೇಳಿದ ಬಿಜೆಪಿ ಕಾರ್ಯಕರ್ತ ಜಯಾನಂದ ಬಂಗೇರರ ಮನೆಗೆ ನುಗ್ಗಿ ದಾಂದಲೆ ನಡೆಸಿರುವ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ.ತಾನು 1400 ಕೋಟಿಯ ಅನುದಾನ ತಂದಿದ್ದೇನೆ ಎಂದು ಹೇಳುವ ಶಾಸಕರಿಗೆ ಆ ಬಗ್ಗೆ ಮಾಹಿತಿ ನೀಡಲು ಹಿಂಜರಿಕೆ ಏಕೆ…?  ಅನುದಾನದ ಬಗೆಗೆ ಮಾಹಿತಿ ನೀಡಲು ಪುತ್ತೂರು ಶಾಸಕರು ವಿಫಲರಾಗಿದ್ದು, ಹತಾಶರಾಗಿರುವ ಶಾಸಕರು ತನ್ನ ಗೂಂಡ ಕಾರ್ಯಕರ್ತರ ಮೂಲಕ ಬಾಯಿ ಮುಚ್ಚಿಸುವ ಕೆಲಸವನ್ನು ಮಾಡುತ್ತಿದ್ದು, ಇಂತಹ ಗೊಡ್ಡು ಬೆದರಿಕೆಗಳಿಗೆ ಬಿಜೆಪಿ ಕಾರ್ಯಕರ್ತರು ಹೆದರುವುದಿಲ್ಲ.

ಕಾಂಗ್ರೆಸ್ ಸರಕಾರ ಬಂದ ನಂತರ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದ್ದು, ಈ ರೀತಿಯ ಘಟನೆಗಳಿಗೆ ಅವಕಾಶಗಳನ್ನು ನೀಡಬಾರದು, ಸದರಿ ಪ್ರಕರಣವನ್ನು ಪೋಲಿಸರು ಪ್ರಭಾವಗಳಿಗೆ ಮಣಿಯದೇ ಗಂಭೀರವಾಗಿ ಪರಿಗಣಿಸಿ ಕಾಂಗ್ರೆಸ್ ಗೂಂಡಾಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತೇನೆ ಎಂದಿದ್ದಾರೆ.

- Advertisement -
spot_img

Latest News

error: Content is protected !!