Friday, May 17, 2024
Homeಅಪರಾಧವರನ ಮನೆಯಲ್ಲಿ ವಧು ಆತ್ಮಹತ್ಯೆ; ಮದುವೆಗೆ ಎರಡು ದಿನ ಬಾಕಿಯಿರುವಾಗ ಸಂಭವಿಸಿದ ಘಟನೆ

ವರನ ಮನೆಯಲ್ಲಿ ವಧು ಆತ್ಮಹತ್ಯೆ; ಮದುವೆಗೆ ಎರಡು ದಿನ ಬಾಕಿಯಿರುವಾಗ ಸಂಭವಿಸಿದ ಘಟನೆ

spot_img
- Advertisement -
- Advertisement -

ವಿಜಯ ನಗರದ ಹೊಸಪೇಟೆ ತಾಲೂಕಿನ ಟಿಬಿ ಡ್ಯಾಂ ಎಂಬಲ್ಲಿ ಯುವತಿಯೊಬ್ಬಳು ಇನ್ನೇನು ಮದುವೆಗೆ ಎರಡು ದಿನ ಬಾಕಿ ಇರುವಾಗ ವರನ ಮನೆಯಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತಪಟ್ಟ ಯುವತಿ ಐಶ್ವರ್ಯಾ. ಯುವಕ ಆಶೋಕ ಮತ್ತು ಐಶ್ವರ್ಯಾ ಇಬ್ಬರು ಖಾಸಗಿ ಕಂಪನಿಯ ಉದ್ಯೋಗಿಗಳಾಗಿದ್ದು, ಕಳೆದ ಆರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಇನ್ನು ಇವರಿಬ್ಬರದ್ದು ಅಂತರ್ಜಾತಿ ವಿವಾಹವಾಗಿದ್ದು, ಈ ನಿಟ್ಟಿನಲ್ಲಿ ಕೆಲವು ಷರತ್ತುಗಳ ಮೇಲೆ ಮದುವೆ ಮಾಡಿಕೊಡಲು ಯುವಕನ ಕಡೆಯವರು ಒಪ್ಪಿದ್ದರು. ನಮ್ಮ ಸಂಪ್ರದಾಯದಂತೆ ಮದುವೆ ಮಾಡಿಕೊಳ್ಳುತ್ತೇವೆ, ಇದೀಗ ಶಾಸ್ತ್ರ ಇದೆ ಎಂದು ಹೇಳಿ ಐಶ್ವರ್ಯಾಳನ್ನು ಹುಡುಗನ ಕಡೆಯವರು ಕರೆದುಕೊಂಡು ಹೋಗಿದ್ದರು. ಹುಡುಗಿ ಕಡೆಯವರು ಯಾರೂ ಬರಬಾರದೆಂದು ಷರತ್ತು ಕೂಡ ಹಾಕಿದ್ರು ಎಂದು ಹುಡುಗಿಯ ಮನೆಯವರು ತಿಳಿಸಿದ್ದಾರೆ.

ಆದರೆ ಯುವತಿಯು ವರನ ಮನೆಯಲ್ಲಿ ಏಕಾಏಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ಕಾರಣವೇನೆಂದು ತಿಳಿದು ಬಂದಿಲ್ಲ ಎಂದಿದ್ದಾರೆ. ಇನ್ನು ನಮ್ಮ ಮಗಳು ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಹೇಡಿಯಲ್ಲ, ಇದೊಂದು ವ್ಯವಸ್ಥಿತ ಕೊಲೆಯಾಗಿದ್ದು, ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಕತೆ ಕಟ್ಟುತ್ತಿದ್ದಾರೆ ಎಂದು ಯುವತಿ ಕಡೆಯವರು ಗಂಭೀರ ಆರೋಪ ಮಾಡಿದ್ದಾರೆ.

 ಈ ಘಟನೆಯ ಬಗ್ಗೆ ಹೊಸಪೇಟೆಯ ಟಿಬಿ ಡ್ಯಾಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆಸಿದ್ದಾರೆ.

- Advertisement -
spot_img

Latest News

error: Content is protected !!