- Advertisement -
- Advertisement -
ನವದೆಹಲಿ: ಈ ಬಾರಿಯ ಗಣರಾಜ್ಯೋತ್ಸವವನ್ನು ಕೊರೋನಾ ಕಾರಾಣದಿಂದ ಸರಳವಾಗಿ ನಡೆಸಲು ತೀರ್ಮಾನಿಸಲಾಗಿದೆ. ಮುಂದಿನ ತಿಂಗಳು ರಾಜ್ಪಥ್ನಲ್ಲಿ ನಡೆಯಲಿರುವ ಗಣರಾಜ್ಯೋತ್ಸವದಲ್ಲಿ ಕಡಿಮೆ ಅಂತರದ ಪಥ ಸಂಚಲನದ ವ್ಯವಸ್ಥೆಯನ್ನು ಸರ್ಕಾರ ರೂಪಿಸಿದೆ. ಈ ವೇಳೆ ಸಣ್ಣ ಪ್ರಮಾಣದ ಕಾರ್ಯಕ್ರಮಗಳು ಮಾತ್ರ ನೆರವೇರಲಿವೆ.
ಹಿಂದೆ ಪ್ರತಿವರ್ಷ, ರಾಜ್ಪಥ್ನಲ್ಲಿ ನಡೆಯುವ ಗಣರಾಜ್ಯೋತ್ಸವದಂದು ನಡೆಯುವ ಕಾರ್ಯಕ್ರಮದಲ್ಲಿ ದೇಶದ ಮಿಲಿಟರಿ ಪಡೆಯು ತನ್ನ ಅದ್ಭುತ ಪ್ರದರ್ಶನವನ್ನು ನೀಡುತ್ತಿತ್ತು. ಅಲ್ಲದೆ ಈ ಬಾರಿಯ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.ಈ ಬಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೇವಲ 25 ಸಾವಿರ ಪ್ರೇಕ್ಷಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಪ್ರವೇಶ ನಿರಾಕರಿಸಲಾಗಿದೆ.
- Advertisement -