Monday, April 29, 2024
Homeಕರಾವಳಿಬೆಳ್ತಂಗಡಿ : ಮರಳಿ ದೇವಸ್ಥಾನ ಸೇರಿದ ನದಿಯಲ್ಲಿ ವಿಸರ್ಜಿಸಿದ್ದ ಮೂರ್ತಿ

ಬೆಳ್ತಂಗಡಿ : ಮರಳಿ ದೇವಸ್ಥಾನ ಸೇರಿದ ನದಿಯಲ್ಲಿ ವಿಸರ್ಜಿಸಿದ್ದ ಮೂರ್ತಿ

spot_img
- Advertisement -
- Advertisement -

ಬೆಳ್ತಂಗಡಿ : ಕಳೆದ ವರ್ಷ ನದಿಯಲ್ಲಿ ವಿಸರ್ಜಿಸಲಾಗಿದ್ದ ದೇವರ ಮೂರ್ತಿಯನ್ನು ದೈವಜ್ಞರ ಆಜ್ಞೆಯಂತೆ ಮತ್ತೆ ಹುಡುಕಿ ದೇವಸ್ಥಾನಕ್ಕೆ ತರಲಾಗಿದೆ.

ಉಜಿರೆ ಗ್ರಾಮದ ಪೆರ್ಲದಲ್ಲಿ ಗ್ರಾಮಸ್ಥರಿಂದ ಪುರಾತನ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ನವೀಕರಣಕ್ಕಾಗಿ ದೈವಜ್ಞರಿಂದ ಅಷ್ಟಮಂಗಲ ಪ್ರಶ್ನೆ ಇಟ್ಟ ಸಂದರ್ಭದಲ್ಲಿ ದೇವಸ್ಥಾನದಲ್ಲಿ ಪೊಜಿಸಿದ್ದ ಶ್ರೀ ಲಕ್ಷ್ಮಿ ಜನಾರ್ದನ ದೇವರ ಮೂರ್ತಿಯನ್ನು ಕಳೆದ ಡಿಸೆಂಬರ್ ನಲ್ಲಿ ನಿಡಿಗಲ್ ನೇತ್ರಾವತಿ ನದಿಯಲ್ಲಿ  ವಿಸರ್ಜಿಸಿ ಬಾಲಾಲಯದಲ್ಲಿ ಬೇರೊಂದು ಮೂರ್ತಿಯನ್ನು ಸ್ಥಾಪಿಸಲಾಗಿತ್ತು. ಪೆರ್ಲದಲ್ಲಿ ಕಳೆದ ಡಿ.8 ಮತ್ತು 9 ಹಾಗೂ 15 ಮತ್ತು 16ರಂದು ದೈವಜ್ಞರಾದ ನೆಲ್ಯಾಡಿಯ ಶ್ರೀಧರ ಗೋರೆಯವರ ನೇತೃತ್ವದಲ್ಲಿ ಅಷ್ಟಮಂಗಲ ಪ್ರಶ್ನೆ ನಡೆದಿದೆ.

ಈ ವೇಳೆ ಅವರು ತಿಳಿಸಿದಂತೆ ಮೊದಲು ಪೂಜಿಸಿದ ಮೂರ್ತಿಯನ್ನೇ ಪ್ರತಿಷ್ಠಾಪನೆ ಮಾಡಬೇಕು ಎಂದು ತಿಳಿಸಿ ಡಿ.18ರಂದು ಹುಡುಕಿದರೆ ವಿಸರ್ಜನೆ ಮಾಡಿದ ಪರಿಸರದಲ್ಲಿ ಮೂರ್ತಿ ಸಿಗುತ್ತದೆ ಎಂದು ಹೇಳಿದ್ದರು. ಆ ಪ್ರಕಾರ ಹುಡುಕಿದಾಗ ಅದೇ ಮೂರ್ತಿ ನಿಡಿಗಲ್ ಕಿಂಡಿ ಅಣೆಕಟ್ಟಿನ ಸಮೀಪ ಪತ್ತೆಯಾಗಿದೆ. ಇದೇ ದೇವಸ್ಥಾನಕ್ಕೆ ಸಂಬಂಧಪಟ್ಟಂತೆ ಇತ್ತೀಚೆಗೆ ಅವರು ತಿಳಿಸಿದ ದೇವಸ್ಥಾನದ ಪರಿಸರ ಜಾಗದಲ್ಲಿ ಅಗೆದಾಗ ಮಣ್ಣಿನಡಿಯಲ್ಲಿ ಪುರಾತನ ಶಿವಲಿಂಗ ಕೂಡ ಪತ್ತೆಯಾಗಿದೆ.ನಿಡಿಗಲ್ ನದಿಯಲ್ಲಿ ಸಿಕ್ಕಿರುವ ಮೂರ್ತಿಯನ್ನು ದೇಗುಲಕ್ಕೆ ಕೊಂಡೊಯ್ಯಲಾಗಿದೆ.

ದೇವಸ್ಥಾನದ ಜೀರ್ಣೋದ್ದಾರಕ್ಕಾಗಿ ಕೆಲಸ ಕಾರ್ಯಗಳು ನಡೆಯುತ್ತಿದ್ದು ಉಜಿರೆ ಗ್ರಾ.ಪಂ ಉಪಾಧ್ಯಕ್ಷ ರವಿಕುಮಾರ್ ಇವರ ಅಧ್ಯಕ್ಷತೆಯಲ್ಲಿ ಮೊಕ್ತೇಸರ ಹಾಗೂ ಕಾರ್ಯದರ್ಶಿ ಕೃಷ್ಣ ಒಪ್ಪಂತ್ತಾಯರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗಿದೆ. ಅಷ್ಟಮಂಗಲ ಪ್ರಶ್ನೆ ಸಂದರ್ಭದಲ್ಲಿ ಶ್ರೀಧರ ಗೋರೆ ಅವರ ಜತೆ ಮಂಗಳೂರು ಮಂಗಳಾದೇವಿ ದೇವಸ್ಥಾನದ ಅರ್ಚಕ ಗಣೇಶ್ ಐತಾಳ, ಶ್ರೀನಿಧಿ ಮುಚ್ಚಿನ್ನಾಯ ಕಾರಿಂಜ,ಅರ್ಚಕ ಅನಂತ ಇರ್ವತ್ರಾಯ ಸಹಕರಿಸಿದರು.

ಅಷ್ಟಮಂಗಲದ ಬಳಿಕ ಪ್ರಶ್ನಾಚಿಂತನೆಯಲ್ಲಿ ಬಂದಂತೆಯೇ ಮುಂದಿನ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳು ನಡೆಯಲಿದೆ. ಈ ಸಂದರ್ಭದಲ್ಲಿಯೇ ಅದೇ ಲಕ್ಷ್ಮಿ ಜನಾರ್ದನ ಮೂರ್ತಿ ಮತ್ತು ಶಿವಲಿಂಗ ಪತ್ತೆಯಾಗಿರುವುದರಿಂದ ಕ್ಷೇತ್ರದ ಸಾನಿಧ್ಯಕ್ಕೆ ಹೆಚ್ಚಿನ ಶಕ್ತಿ ಬಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!