- Advertisement -
- Advertisement -
ಬೆಂಗಳೂರು: ಸ್ಯಾಂಡಲ್ ವುಡ್ ನ ದಿವಂಗತ ಹಾಸ್ಯ ನಟ ಬುಲೆಟ್ ಪ್ರಕಾಶ್ ರವರ ಮಗನ ಮೇಲೆ ಮಂಗಳಮುಖಿರು ದಾಳಿ ಮಾಡಿರುವ ಘಟನೆ ಹೆಬ್ಬಾಳದ ಫ್ಲೈ ಓವರ್ ಬಳಿ ನಡೆದಿದೆ.
ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ನಿನ್ನೆ ರಾತ್ರಿ ರಾತ್ರಿ 9 ಗಂಟೆ ವೇಳೆ ಜಿಮ್ ಮುಗಿಸಿ ಗಾಡಿಯಲ್ಲಿ ಮನೆಗೆ ವಾಪಸ್ ಹೋಗುತ್ತಿದ್ದ ವೇಳೆ ಹೆಬ್ಬಾಳ ಫ್ಲೈಓವರ್ ಬಳಿ ಮಂಗಳಮುಖಿಯರು ತಡೆದ ದಾಳಿ ಮಾಡಿದ್ದಾರೆ ಎನ್ನಲಾಗಿದೆ.
ಹೆಬ್ಬಾಳ ಫ್ಲೈ ಓವರ್ ಬಳಿ ಮಂಗಳಮುಖಿಯರು ರಕ್ಷಕ್ ಬ್ಯಾಗ್ ಹಿಡಿದು ಎಳೆದ ಕಾರಣ ಗಾಡಿಯಿಂದ ಕೆಳಗೆ ಬಿದ್ದು ಸಣ್ಣಪುಟ್ಟ ಗಾಯಗಳಾಗಿವೆ. ಬೈಕ್ಗೂ ಡ್ಯಾಮೇಜ್ ಆಗಿದೆ. ಈ ವೇಳೆ ಬೈಕ್ ಸ್ಥಳದಲ್ಲೇ ಬಿಟ್ಟು ಹೋಗಿದ್ದ ರಕ್ಷಕ್ ಕೊನೆಗೆ ಕೊನೆಗೆ ಹೆಬ್ಬಾಳ ಪೊಲೀಸರ ನೆರವಿನಲ್ಲಿ ಬೈಕ್ ಪಡೆದು ಮನೆಗೆ ತೆರಳಿದ್ದಾರೆ.ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
- Advertisement -