Saturday, April 27, 2024
Homeಕರಾವಳಿಹಾಸ್ಯ ನಟ ಬುಲೆಟ್ ಪ್ರಕಾಶ್ ಪುತ್ರನ ಮೇಲೆ ಮಂಗಳಮುಖಿಯರ ದಾಳಿ; ಪ್ರಕರಣ ದಾಖಲು !

ಹಾಸ್ಯ ನಟ ಬುಲೆಟ್ ಪ್ರಕಾಶ್ ಪುತ್ರನ ಮೇಲೆ ಮಂಗಳಮುಖಿಯರ ದಾಳಿ; ಪ್ರಕರಣ ದಾಖಲು !

spot_img
- Advertisement -
- Advertisement -

ಬೆಂಗಳೂರು: ಸ್ಯಾಂಡಲ್ ವುಡ್ ನ ದಿವಂಗತ ಹಾಸ್ಯ ನಟ ಬುಲೆಟ್ ಪ್ರಕಾಶ್ ರವರ ಮಗನ ಮೇಲೆ ಮಂಗಳಮುಖಿರು ದಾಳಿ ಮಾಡಿರುವ ಘಟನೆ ಹೆಬ್ಬಾಳದ ಫ್ಲೈ ಓವರ್ ಬಳಿ ನಡೆದಿದೆ.

ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ನಿನ್ನೆ ರಾತ್ರಿ ರಾತ್ರಿ 9 ಗಂಟೆ ವೇಳೆ ಜಿಮ್ ಮುಗಿಸಿ ​​ ಗಾಡಿಯಲ್ಲಿ ಮನೆಗೆ ವಾಪಸ್ ಹೋಗುತ್ತಿದ್ದ ವೇಳೆ ಹೆಬ್ಬಾಳ ಫ್ಲೈಓವರ್ ಬಳಿ ಮಂಗಳಮುಖಿಯರು ತಡೆದ ದಾಳಿ ಮಾಡಿದ್ದಾರೆ ಎನ್ನಲಾಗಿದೆ.

ಹೆಬ್ಬಾಳ ಫ್ಲೈ ಓವರ್ ಬಳಿ ಮಂಗಳಮುಖಿಯರು ರಕ್ಷಕ್ ಬ್ಯಾಗ್ ಹಿಡಿದು ಎಳೆದ ಕಾರಣ ಗಾಡಿಯಿಂದ ಕೆಳಗೆ ಬಿದ್ದು ಸಣ್ಣಪುಟ್ಟ ಗಾಯಗಳಾಗಿವೆ. ಬೈಕ್​​ಗೂ ಡ್ಯಾಮೇಜ್ ಆಗಿದೆ. ಈ ವೇಳೆ ಬೈಕ್ ಸ್ಥಳದಲ್ಲೇ ಬಿಟ್ಟು ಹೋಗಿದ್ದ ರಕ್ಷಕ್ ಕೊನೆಗೆ ಕೊನೆಗೆ ಹೆಬ್ಬಾಳ ಪೊಲೀಸರ ನೆರವಿನಲ್ಲಿ ಬೈಕ್ ಪಡೆದು ಮನೆಗೆ ತೆರಳಿದ್ದಾರೆ.ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

- Advertisement -
spot_img

Latest News

error: Content is protected !!