Saturday, May 25, 2024
Homeಕರಾವಳಿಮದುವೆ ದಿಬ್ಬಣದ ಬಸ್ ಅಪಘಾತ ಪ್ರಕರಣ:ಸಾವಿನ ಸಂಖ್ಯೆ 8ಕ್ಕೆ ಏರಿಕೆ

ಮದುವೆ ದಿಬ್ಬಣದ ಬಸ್ ಅಪಘಾತ ಪ್ರಕರಣ:ಸಾವಿನ ಸಂಖ್ಯೆ 8ಕ್ಕೆ ಏರಿಕೆ

spot_img
- Advertisement -
- Advertisement -

ಸುಳ್ಯ: ಕಾಸರಗೋಡು ಮದುವೆ ದಿಬ್ಬಣ ಬಸ್ ಅಪಘಾತ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 8 ಕ್ಕೆ ಏರಿಕೆಯಾಗಿದೆ. ಘಟನೆಲ್ಲಿ ಹತ್ತಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. 30 ಕ್ಕೂ ಹೆಚ್ಚು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ. ರಾಜೇಶ್, ರವಿಚಂದ್ರ, ಆದರ್ಶ್, ಶ್ರೇಯಸ್, ಸುಮತಿ, ಶಶಿ, ಜಯಲಕ್ಷ್ಮಿ ಮೃತ ದುರ್ದೈವಿಗಳು.

ಕೊಡಗಿನ ಚೆತ್ತುಕಯದ ವರನ ಮನೆಯಲ್ಲಿ ನಡೆಯುತ್ತಿದ್ದ ಮದುವೆ ಕಾರ್ಯಕ್ರಮಕ್ಕೆ ಪುತ್ತೂರಿನ ಈಶ್ವರ ಮಂಗಲದ ವಧುವಿನ ಮನೆಯಿಂದ ಹೊರಟಿದ್ದ ದಿಬ್ಬಣದ ಬಸ್ ಪೆರಿಯಾರಂ ಘಾಟ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದಿದೆ. ಬಸ್​ನಲ್ಲಿ ಒಟ್ಟು 63 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಘಟನೆ ಬಗ್ಗೆ ತನಿಖೆಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಆದೇಶಿಸಿದ್ದಾರೆ.

- Advertisement -
spot_img

Latest News

error: Content is protected !!