- Advertisement -
- Advertisement -
ಕೊಡಗು : ಕೆಎಸ್ ಆರ್ ಟಿಸಿ ಬಸ್ ಅಪಘಾತವಾಗಿ 11 ಮಂದಿ ಗಾಯಗೊಂಡಿರುವ ಘಟನೆ ಮಡಿಕೇರಿಯ ಆನೆಕಾಡು ತಿರುವಿನಲ್ಲಿ ನಡೆದಿದೆ. ಬಸ್ನಲ್ಲಿ 40 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, 11 ಮಂದಿಗೆ ಗಂಭೀರ ಗಾಯಗಳಾಗಿದೆ.
ಹಾಸನದಿಂದ ಮಡಿಕೇರಿಗೆ ಸರ್ಕಾರಿ ಬಸ್ ತೆರಳುತ್ತಿತ್ತು., ಬಸ್ ಆನೆಕಾಡು ಇಳಿಜಾರಿನಲ್ಲಿ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದೆ. ಬಸ್ನಲ್ಲಿದ್ದ 11 ಮಂದಿಗೆ ಗಾಯಗಳಾಗಿದೆ. ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಶಾಸಕ ಅಪ್ಪಚ್ಚು ರಂಜನ್ ಭೇಟಿ ನೀಡಿದ್ಧಾರೆ.
- Advertisement -