- Advertisement -
- Advertisement -
ಉಡುಪಿ: ಮಂಗಳೂರಿನಿಂದ ಉಡುಪಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸೊಂದು ಅಪಘಾತವಾಗಿರುಲ ಘಟನೆ ಉಡುಪಿ-ಉದ್ಯಾವರ ಜಂಕ್ಷನ್ ಬಳಿ ನಡೆದಿದೆ.
ಬಸ್ ಚಲಿಸುತ್ತಿದ್ದ ವೇಳೆ ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಬಳಿಕ ಡಿವೈಡರ್ ಗೆ ಹಾರಿ ಪಲ್ಟಿಯಾಗಿದೆ ಎನ್ನಲಾಗಿದೆ. ಬಸ್ ನಲ್ಲಿ ಪ್ರಯಾಣಿಕರು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಇಲ್ಲದೆ ಪಾರಾಗಿದ್ದಾರೆ ಎನ್ನಲಾಗಿದೆ.
- Advertisement -