ಧಾರವಾಡ: ಮಕರ ಸಂಕ್ರಾಂತಿ ಸಂದರ್ಭದಲ್ಲಿ ಗೋವಾದಲ್ಲಿ ಸಂತೋಷ ಕೂಟ ಆಚರಿಸಲೆಂದು ಮಹಿಳೆಯರನ್ನು ಕರೆದೊಯ್ಯುತ್ತಿದ್ದ ಟೆಂಪೊ ಟ್ರಾವೆಲರ್ ತಾಲೂಕಿನ ಇಟಿಗಟ್ಟಿ ಬಳಿ ಭೀಕರ ರಸ್ತೆ ಅಪಘಾತಕ್ಕೀಡಾಗಿದ್ದು ಒಂಬತ್ತು ಮಂದಿ ಮಹಿಳೆಯರು ಸೇರಿದಂತೆ 11 ಜನ ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಹಲವರು ಗಾಯಗೊಂಡಿದ್ದಾರೆ.
ಧಾರವಾಡದಿಂದ ಸುಮಾರು 8 ಕಿಮೀ ದೂರದಲ್ಲಿರು ಇಟ್ಟಿಗಟ್ಟಿ ಎಂಬ ಸ್ಥಳದಲ್ಲಿ ಅಪಘಾತ ಸಂಭವಿಸಿದೆ.ಅಪಘಾತದ ಭೀಕರತೆಗೆ 11 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡ ಆರು ಮಂದಿಯನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ,
ಮೃತಪಟ್ಟವರನ್ನು ಪ್ರವೀಣ್, ಆಶಾ, ಮೀರಾಬಾಯಿ, ಪರಂಜ್ಯೋತಿ, ರಾಜೇಶ್ವರಿ, ಶಕುಂತಲಾ, ಉಷಾ, ವೇದಾ, ವೀಣಾ, ಮಂಜುಳ, ನಿರ್ಮಲ, ರಜನೀಶಿ, ಪ್ರೀತಿ, ಸ್ವಾತಿ ಎಂದು ಗುರುತಿಸಲಾಗಿದೆ. ಚಾಲಕನ ಹೆಸರು ತಿಳಿದು ಬಂದಿಲ್ಲ. ಈ ಪೈಕಿ ಇಬ್ಬರು ವೈದ್ಯರಿದ್ದಾರೆ ಎನ್ನಲಾಗಿದೆ.
ಮೃತರೆಲ್ಲರೂ ದಾವಣಗೆರೆ ಮೂಲದವರಾಗಿದ್ದು, 16 ಮಹಿಳೆಯರು ಲೇಡಿಸ್ ಕ್ಲಬ್ ನಿಂದ ಸಂತೋಷ ಕೂಟಕ್ಕಾಗಿ ಗೋವಾಕ್ಕೆ ತೆರಳಿದ್ದಾಗಿ ಗಾಯಗೊಂಡವರ ಪೈಕಿ ಮಹಿಳೆಯೊಬ್ಬರು ಹೆಳಿದ್ದಾರೆ ಎನ್ನಲಾಗಿದೆ. ದಾವಣಗೆರೆಯಿಂದ ನಸುಕಿನ ವೇಳೆ ಹೊರಟಿದ್ದ ಇವರುಗಳು ಧಾರವಾಡದ ಪರಿಚಯಸ್ಥರ ಮನೆಗೆ ಉಪಹಾರಕ್ಕೆಂದು ತೆರಳುವವರಿದ್ದರು.
ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು, ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲು ಹಲವು ಸಮಯದವರೆಗೆ ಟ್ರಾಫಿಕ್ ಜಾಮ್ ಉಂಟಾಗಿತ್ತು.