Thursday, May 2, 2024
Homeಕರಾವಳಿಮಂಗಳೂರು; ಕಟೀಲು ದೇವಸ್ಥಾನದ ಎದುರು ಹೊತ್ತಿ ಉರಿದ ಬಸ್

ಮಂಗಳೂರು; ಕಟೀಲು ದೇವಸ್ಥಾನದ ಎದುರು ಹೊತ್ತಿ ಉರಿದ ಬಸ್

spot_img
- Advertisement -
- Advertisement -

ಮಂಗಳೂರು; ಬಸ್ಸೊಂದು ಹೊತ್ತಿ ಉರಿದು ಬಸ್ಸಿನಲ್ಲಿದ್ದವರು ಪವಾಡ ಸದೃಶ್ಯವಾಗಿ ಬದುಕಿ ಉಳಿದ ಘಟನೆ ಕಟೀಲು ದೇವಸ್ಥಾನದ ಮುಂದೆ ಇಂದು ಮಧ್ಯಾಹ್ನ ನಡೆದಿದೆ.

ಸುರತ್ಕಲ್ ಸಮೀಪದ ಓಎಂಪಿಎಲ್ ಗೆ ಸಿಬ್ಬಂದಿಯನ್ನು ಕರೆದೊಯ್ಯುವ ಎಂಆರ್ ಪಿಎಲ್ ಕಂಪನಿಗೆ ಸೇರಿದ ಬಸ್ಸನ್ನು ಮಧ್ಯಾಹ್ನ 2.45ರ ಸುಮಾರಿಗೆ ಕಟೀಲು ದೇವಸ್ಥಾನದ ಎದುರು ರಾಜ್ಯ ಹೆದ್ದಾರಿಯಲ್ಲಿ ನಿಲ್ಲಿಸಲಾಗಿತ್ತು. ಈ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದ ಏಕಾಏಕಿ ಬಸ್ ಹೊತ್ತಿ ಉರಿದಿದೆ.ಕೂಡಲೇ  ಟ್ಯಾಂಕರ್ ಮೂಲಕ ನೀರು ಹಾಯಿಸಿ ಬೆಂಕಿ ನಂದಿಸಲಾಗಿದೆ.

ಕಟೀಲು ರೂಟ್ ನಲ್ಲಿ ಚಲಿಸುವ ಓಎಂಪಿಎಲ್ ಕಂಪನಿಯ ಈ ಬಸ್ ಕಡೆಯ ನೌಕರನ್ನು ಬಿಟ್ಟು ವಾಪಸ್ಸಾಗುವ ಈ ಘಟನೆ ಸಂಭವಿಸಿದ್ದು, ಬಸ್ಸಿನಲ್ಲಿ ಡ್ರೈವರ್ ಸೇರಿ ಮೂವರು ಇದ್ದರು ಎನ್ನಲಾಗಿದೆ. ಇನ್ನು  ಬೆಂಕಿ ತಗಲಿದ ಕೂಡಲೇ ಬಸ್ಸಿನಲ್ಲಿದ್ದ ಚಾಲಕ ಹಾಗೂ ಇನ್ನಿಬ್ಬರು ಬಸ್ಸಿನಿಂದ ಜಿಗಿದು ಪವಾಡ ಸದೃಶ ಪಾರಾಗಿದ್ದಾರೆ.

- Advertisement -
spot_img

Latest News

error: Content is protected !!