- Advertisement -
- Advertisement -
ಮಡಿಕೇರಿ:ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಬೋಯಿಕೇರಿ ಗ್ರಾಮದಲ್ಲಿ ಸರ್ಕಾರಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಘಟನೆ ರವಿವಾರ ನಡೆದಿದೆ.
ಮೈಸೂರು-ಮಡಿಕೇರಿ ನಡುವೆ ಸಂಚರಿಸುವ ಸರ್ಕಾರಿ ಬಸ್ ಇದಾಗಿದ್ದು ಪ್ರಯಾಣಿಕರಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಸರ್ಕಾರಿ ಬಸ್ನಲ್ಲಿ ತೆರಳುತ್ತಿದ್ದ 30 ಪ್ರಯಾಣಿಕರು ಕೂಡ ಸುರಕ್ಷಿತವಾಗಿದ್ದು, ಬೋಯಿಕೇರಿ ಬಳಿ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಘಟನೆ ನಡೆದಿದೆ.
ಆದರೆ, ದಿಬ್ಬಕ್ಕೆ ಮಗುಚಿಕೊಂಡ ಹಿನ್ನೆಲೆ ಬಸ್ನ ಬಾಗಿಲುಗಳು ಜಾಮ್ ಆಗಿದ್ದವು. ಹೀಗಾಗಿ, ಪ್ರಯಾಣಿಕರು ತುರ್ತು ದ್ವಾರದ ಮೂಲಕ ಹೊರ ಬಂದಿದ್ದಾರೆ.
- Advertisement -