Tuesday, July 2, 2024
Homeಕೊಡಗುಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್;ಪ್ರಯಾಣಿಕರು ಪಾರು!!

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್;ಪ್ರಯಾಣಿಕರು ಪಾರು!!

spot_img
- Advertisement -
- Advertisement -

ಮಡಿಕೇರಿ:ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಬೋಯಿಕೇರಿ ಗ್ರಾಮದಲ್ಲಿ ಸರ್ಕಾರಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಘಟನೆ ರವಿವಾರ ನಡೆದಿದೆ.

ಮೈಸೂರು-ಮಡಿಕೇರಿ ನಡುವೆ ಸಂಚರಿಸುವ ಸರ್ಕಾರಿ ಬಸ್​ ಇದಾಗಿದ್ದು ಪ್ರಯಾಣಿಕರಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಸರ್ಕಾರಿ ಬಸ್​ನಲ್ಲಿ ತೆರಳುತ್ತಿದ್ದ 30 ಪ್ರಯಾಣಿಕರು ಕೂಡ ಸುರಕ್ಷಿತವಾಗಿದ್ದು, ಬೋಯಿಕೇರಿ ಬಳಿ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಘಟನೆ ನಡೆದಿದೆ.

ಆದರೆ, ದಿಬ್ಬಕ್ಕೆ ಮಗುಚಿಕೊಂಡ ಹಿನ್ನೆಲೆ ಬಸ್​ನ ಬಾಗಿಲುಗಳು ಜಾಮ್ ಆಗಿದ್ದವು. ಹೀಗಾಗಿ, ಪ್ರಯಾಣಿಕರು ತುರ್ತು ದ್ವಾರದ ಮೂಲಕ ಹೊರ ಬಂದಿದ್ದಾರೆ.

- Advertisement -
spot_img

Latest News

error: Content is protected !!