- Advertisement -
- Advertisement -
ಮಂಗಳೂರು: ಖಾಸಗಿ ಬಸ್ ವ್ಯವಹಾರ ನೋಡಿಕೊಳ್ಳುತ್ತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.ಬಜಾಲ್ ನಿವಾಸಿ ಪ್ರಜ್ವಲ್ ಡಿ. (35) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂಗಳವಾರ ಬೆಳಗ್ಗೆ ಜೆ.ಎಂ. ರೋಡ್ನಲ್ಲಿರುವ ಸ್ವಗೃಹದಲ್ಲಿ ಫ್ಯಾನ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.ಸಹೋದರ ಬಸ್ನ ಮಾಲೀಕರಾಗಿದ್ದರು. ಪ್ರಜ್ವಲ್ ಅದೇ ವ್ಯವಹಾರ ನೋಡಿಕೊಳ್ಳುತ್ತಿದ್ದರು. ಸಾಲ ಹೊಂದಿದ್ದ ಅವರಿಗೆ ಬ್ಯಾಂಕ್ನವರು ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ.. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತರು ಪತ್ನಿ ಮತ್ತು ನಾಲ್ಕು ವರ್ಷದ ಮಗುವನ್ನು ಅಗಲಿದ್ದಾರೆ
- Advertisement -