- Advertisement -
- Advertisement -
ಬಂಟ್ವಾಳ; ಕೆಎಸ್ಸಾರ್ಟಿಸಿ ಬಸ್ ಹಾಗೂ ಟ್ಯಾಂಕರಿನ ಮಧ್ಯೆ ಢಿಕ್ಕಿ ಸಂಭವಿಸಿ ಬಸ್ ರಸ್ತೆ ಬದಿಯ ಮನೆಗೆ ನುಗ್ಗಿದ ಘಟನೆ ಬಿ.ಸಿ.ರೋಡು-ಪುಂಜಾಲಕಟ್ಟೆ ಹೆದ್ದಾರಿಯ ನಾವೂರಿನ ಫರ್ಲಾದಲ್ಲಿ ನಡೆದಿದೆ.
ಟ್ಯಾಂಕರ್ ಢಿಕ್ಕಿಯಾದ ರಭಸಕ್ಕೆ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಫರ್ಲಾ ನಿವಾಸಿ ಭುಜಂಗ ಮೂಲ್ಯ ಅವರ ಮನೆಗೆ ನುಗ್ಗಿ ಮನೆಯ ಗೋಡೆ ಹಾಗೂ ಮೇಲ್ಛಾವಣಿಯ ಹಂಚಿಗೆ ಹಾನಿಯಾಗಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -