- Advertisement -
- Advertisement -
ಮಂಗಳೂರು: ಮಾ. 16ರಂದು ಸಿಎಂ ಬಸವರಾಜ್ ಬೊಮ್ಮಾಯಿ ಮಂಗಳೂರಿಗೆ ಆಗಮಿಸಲಿದ್ದಾರೆ.
ಬೆಳಗ್ಗೆ 10.30ಕ್ಕೆ ಮೇರಿಹಿಲ್ ಹೆಲಿಪ್ಯಾಡ್ನಲ್ಲಿ ಬಂದಿಳಿಯಲಿದ್ದಾರೆ. ಬಳಿಕ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ದ.ಕ. ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಳ್ಳಲಾಗುವ ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಮ್ಮೇಳನವನ್ನು ಅವರು ಉದ್ಘಾಟಿಸಲಿದ್ದಾರೆ. ಅದಾದ ಬಳಿಕ ತುಮಕೂರು ಜಿಲ್ಲೆಗೆ ತೆರಳಲಿದ್ದಾರೆ ಎನ್ನಲಾಗಿದೆ.
- Advertisement -