Saturday, May 4, 2024
Homeತಾಜಾ ಸುದ್ದಿಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಸುಗ್ರೀವಾಜ್ಞೆ ಹೊರಡಿಸಲು ಇಂದು ಸಂಪುಟ ನಿರ್ಧಾರ ಸಾಧ್ಯತೆ

ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಸುಗ್ರೀವಾಜ್ಞೆ ಹೊರಡಿಸಲು ಇಂದು ಸಂಪುಟ ನಿರ್ಧಾರ ಸಾಧ್ಯತೆ

spot_img
- Advertisement -
- Advertisement -

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಕ್ಕೆ ಮೀಸಲಾತಿ ಹೆಚ್ಚಳ ಕುರಿತು ಸುಗ್ರೀವಾಜ್ಞೆ ಹೊರಡಿಸುವ ಸಂಬಂಧ ಇಂದು ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಸುಗ್ರೀವಾಜ್ಞೆ ಕುರಿತಂತೆ ಈಗಾಗಲೇ ಕಾನೂನು ಇಲಾಖೆ ತನ್ನ ಅಭಿಪ್ರಾಯ ಸಲ್ಲಿಸಿದ್ದು, ಅಡ್ವೋಕೇಟ್ ಜನರಲ್ ಅಭಿಪ್ರಾಯಕ್ಕಾಗಿ ರಾಜ್ಯ ಸರ್ಕಾರ ಕಾಯುತ್ತಿದೆ.

ಎಸ್ ಸಿ ಮತ್ತು ಎಸ್‌ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡುವ ಬಗ್ಗೆ ರಾಜ್ಯ ಸರ್ಕಾರ ಕಳೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದಿತ್ತು.

- Advertisement -
spot_img

Latest News

error: Content is protected !!