ಪುತ್ತೂರು: ಹುಬ್ಬಳ್ಳಿಯಿಂದ ಅಪರಿಚಿತನೊಬ್ಬ ಕುಂಬ್ರದ ಯುವಕನಿಗೆ ಕರೆ ಮಾಡಿ ಅರ್ಧ ರೇಟ್ ಗೆ ಚಿನ್ನ ಕೊಡೋದಾಗಿ ಹೇಳಿ ವಂಚಿಸಲು ಯತ್ನಿಸಿರುವ ಘಟನೆ ನಡೆದಿದೆ.
ಕುಂಬ್ರದ ಕಾರ್ ಡೀಲರ್ ಎಂ.ಎಂ ಸರ್ಫುದ್ದೀನ್ ಎಂಬವರಿಗೆ ಹುಬ್ಬಳಿಯಿಂದ ಎಂದು ಹೇಳಿಕೊಂಡು ಕರೆ ಮಾಡಿದಾತ ನಾನು ನಿಮ್ಮ ಸೆಕೆಂಡ್ ಹ್ಯಾಂಡ್ ವೆಹಿಕಲ್ ಶೋರೂಂನಿಂದ ಬೈಕ್ ಖರೀದಿಸಿದ ಗ್ರಾಹಕ ಎಂದು ಪರಿಚಯಿಸಿಕೊಂಡಿದ್ದ. ನಾನು ಮನೆ ಕಟ್ಟಲು ಪಾಯ ತೆಗೆಯುವ ವೇಳೆ ನನ್ನ ಅಜ್ಜ-ಅಜ್ಜಿಗೆ 6 ಕೆ.ಜಿ. ಹಳೆಯ ಚಿನ್ನದ ನಾಣ್ಯ ಸಿಕ್ಕಿದೆ. ಅದನ್ನು ಅವರು ಮಾರಾಟ ಮಾಡುವಂತೆ ನನ್ನ ಬಳಿ ಹೇಳಿದ್ದಾರೆ. 1 ಕೆ.ಜಿ. ಚಿನ್ನಕ್ಕೆ 30 ಲಕ್ಷ ರೂ. ಇದ್ದು ಅರ್ಧ ಬೆಲೆಗೆ ನಾನು ನಿನಗೆ ತೆಗೆಸಿಕೊಡುತ್ತೇನೆ. ನೀನು ಊರಿಗೆ ತೆರಳಿ ಪರಿಶೀಲಿಸಿದ ಬಳಿಕವೇ ಹಣ ಕೊಟ್ಟರೆ ಸಾಕು ಎಂದು ಹೇಳಿ ನಂಬಿಸಲು ಯತ್ನಿಸಿದ್ದಾನೆ.ಅಲ್ಲದೇ ನೀವು ನನ್ನ ಬಳಿ ಖರೀದಿಸಿದ ಬೈಕ್ ಯಾವುದು ಎಂದು ಸರ್ಫುದ್ದೀನ್ ಕೇಳಿದಾಗ ಆತ ಸರಿಯಾಗಿ ಉತ್ತರ ನೀಡಿಲ್ಲ.
ಈ ಹಿಂದೆ ಬೆಳ್ತಂಗಡಿ ಮೂಲದ ಮೂವರು ಇದೇ ಮಾದರಿಯ ಕರೆಯಿಂದ ಮೋಸ ಹೋಗಿ ಚಿನ್ನದ ಆಸೆಗಾಗಿ ಪ್ರಾಣ ಕಳೆದುಕೊಂಡ ಘಟನೆಯ ಅರಿವಿದ್ದ ಸರ್ಫುದ್ದೀನ್ ಈ ಕರೆಯನ್ನು ರೆಕಾರ್ಡ್ ಮಾಡಿಕೊಂಡು ಸಾಮಾಜಿಕ ಜಾಲ ತಾಣದಲ್ಲಿ ಹರಿ ಬಿಟ್ಟಿದ್ದಾರೆ.