ಉಪ್ಪಿನಂಗಡಿಯಲ್ಲಿ ಅಕ್ರಮವಾಗಿ ಸಾಮಾಜಿಕ ಹೋರಾಟಗಾರರನ್ನು ಬಂಧಿಸಿದ್ದ ಪೊಲೀಸರ ನಡೆಯನ್ನು ಖಂಡಿಸಿ ಪ್ರತಿಭಟಿಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ನಡೆಸಿದ ಭೀಕರ ಲಾಠಿ ಪ್ರಹಾರದ ಘಟನೆಯನ್ನು ಖಂಡಿಸಿ ಕ್ಯಾಂಪಸ್ ಫ್ರೆಂಟ್ ಆಫ್ ಇಂಡಿಯಾ ಮಂಗಳೂರು ಜಿಲ್ಲಾ ಸಮಿತಿ ವತಿಯಿಂದ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕ್ಯಾಂಪಸ್ ಫ್ರಂಟ್ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ಸಿರಾಜ್ ಮಂಗಳೂರು ಪ್ರತಿಭಟನಾಕಾರರ ಮೇಲೆ ಪೊಲೀಸರು ನಡೆಸಿದ ಭೀಕರ ಲಾಠಿ ಪ್ರಹಾರದ ಘಟನೆಯು ಪೊಲೀಸ್ ರಾಜ್ಯಕ್ಕೆ ಸ್ಪಷ್ಟ ನಿದರ್ಶನವಾಗಿದೆ.
ಪೊಲೀಸರ ತಾರತಮ್ಯ ನೀತಿ , ಕೋಮುವಾದಿ ಮನಸ್ಥಿತಿಯು ಕರ್ನಾಟಕದ ಸೌಹಾರ್ದತೆಯ ಪರಂಪರೆಗೆ ಕಪ್ಪು ಚುಕ್ಕೆಯಾಗಿದೆ. ಹೀಗೆ ಮುಂದುವರೆದರೆ ರಾಜ್ಯದಲ್ಲಿ ಪೊಲೀಸರಿಂದಲೇ ಅವರ ನಡೆಯಿಂದಾಗಿ ಶಾಂತಿ ಸುವ್ಯವಸ್ಥೆಗೆ ಧಕ್ಕೆಯಾಗಲಿದೆ ಎಂದರು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ರಾಜ್ಯ ಸಮಿತಿ ಸದಸ್ಯೆ ಮುರ್ಶಿದಾ ಮಂಗಳೂರು, ಜಿಲ್ಲಾಧ್ಯಕ್ಷ ಸರ್ಫುದ್ದೀನ್, ನಗರ ಕಾರ್ಯದರ್ಶಿ ಹಫೀಝ್, ಗ್ರಾಮಾಂತರ ಅಧ್ಯಕ್ಷ ಅಶ್ರಫ್ ಪೊರ್ಕೊಡಿ, ಕಾರ್ಯದರ್ಶಿ ಸರ್ಫರಾಝ್, ಬಂಟ್ವಾಳ ಅಧ್ಯಕ್ಷ ಅಶ್ರಕ್ ಉಪಸ್ಥಿತರಿದ್ದರು.