Friday, April 26, 2024
Homeಕರಾವಳಿಕಾರು-ಲಾರಿ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

ಕಾರು-ಲಾರಿ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

spot_img
- Advertisement -
- Advertisement -

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಹೆಬ್ಬುಳ ಬಳಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ಅಂಕೋಲಾ ತಾಲ್ಲೂಕಿನ ಅವರ್ಸಾದ ಗುರುಪ್ರಸಾದ ಅಣ್ವೇಕರ (32) ಹಾಗೂ ಅವರ ಅಕ್ಕನ ಮಗಳು ಸಂಜನಾ ಸಂತೋಷ ರಾಯ್ಕರ (7) ಮೃತರು. ಸಂತೋಷ ರಾಯ್ಕರ, ಪತ್ನಿ ಅಶ್ವಿನಿ ರಾಯ್ಕರ , ಮಗ ಸೋಹಂ ರಾಯ್ಕರ ಹಾಗೂ ಪ್ರೀತಂ ರೇವಣಕರ ಇವರಿಗೆ ಗಾಯಗಳಾಗಿದ್ದು, ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಗುರುಪ್ರಸಾದ ಅವರು ಪುಣೆಯಲ್ಲಿ ನೆಲೆಸಿರುವ ತಮ್ಮ ಅಕ್ಕನ ಕುಟುಂಬವನ್ನು ಯುಗಾದಿ ಹಬ್ಬದ ನಿಮಿತ್ತ ಅವರ್ಸಾಕ್ಕೆ ಕಾರಿನಲ್ಲಿ ಕರೆದುಕೊಂಡು ಬರುತ್ತಿದ್ದರು. ಅವರ ಸ್ನೇಹಿತ ಪ್ರೀತಮ್ ರೇವಣಕರ ಜೊತೆಗಿದ್ದರು. ಮಹಾರಾಷ್ಟ್ರ ಮೂಲದ ಲಾರಿ ಅಂಕೋಲಾದಿಂದ ಯಲ್ಲಾಪುರ ಮಾರ್ಗವಾಗಿ ಚಲಿಸುತ್ತಿತ್ತು. ಹೆಬ್ಬುಳದ ಬಳಿಯಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!