- Advertisement -
- Advertisement -
ಹಾವೇರಿ: ಎರಡು ತಿಂಗಳ ಹಿಂದೆಷ್ಟೇ ಖರೀದಿಸಿದ ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಹೊತ್ತಿ ಉರಿದ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಕುಣಿಮೆಳ್ಳಿಹಳ್ಳಿ ಗ್ರಾಮದ ಸಮೀಪ ಗದಗ-ಹಾವೇರಿ ರಾಷ್ಟ್ರೀಯ ಹೆದ್ದಾರಿ- 4ರಲ್ಲಿ ನಡೆದಿದೆ. ಗದಗ ನಗರದ ನಿವಾಸಿ ವಿಕ್ರಂ ಬಾಪನಾ ಹಿರಾಚಂದ್ ಅವರಿಗೆ ಸೇರಿದ ಕಾರು ಎನ್ನಲಾಗಿದೆ.
ಚಾಲಕ ಸೇರಿ ಮೂವರು ಪ್ರಯಾಣಿಸುತ್ತಿದ್ದು ಪ್ರಯಾಣ ಮಾಡುತ್ತಿದ್ದು ಈ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಏಕಾಏಕಿ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದ್ದರಿಂದ ಎಚ್ಚೆತ್ತುಕೊಂಡು ತಕ್ಷಣ ರಸ್ತೆ ಬದಿಗೆ ಕಾರು ನಿಲ್ಲಿಸಿ, ಮೂವರು ಪ್ರಯಾಣಿಕರು ಕೆಳಗಿಳಿಯುತ್ತಿದ್ದಂತೆ ಬೆಂಕಿ ಹೊತ್ತಿಕೊಂಡು ಉರಿಯಲು ಪ್ರಾರಂಭಿಸಿದೆ. ಕಾರು ಖರೀದಿಸಿ 2 ತಿಂಗಳಾಗಿತ್ತು ಎನ್ನಲಾಗಿದೆ.
- Advertisement -